ಶಕ್ತಿ ಯೋಜನೆಯಲ್ಲಿ ದೊಡ್ಡ ಮೈಲಿಗಲ್ಲು – ಡಾ. ಪುಷ್ಪಾ ಅಮರನಾಥ್

ಮೈಸೂರು : ಈವರೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಇದೊಂದು ದೊಡ್ಡ ಮೈಲಿಗಲ್ಲಾಗಿದ್ದು ಈ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ ಎಂದು ಗ್ಯಾರೆಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನುಡಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಪುಷ್ಪಾ ಅಮರನಾಥ್, ಈವರೆಗೆ ನಮ್ಮ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ಸರ್ಕಾರ ಜಿಲ್ಲಾ ತಾಲೂಕು ಮಟ್ಟದಲ್ಲಿ 5 ಶತಕ ಮಹಿಳಾ ಸಂಭ್ರಮ ಆಚರಿಸುತ್ತಿದೆ. ನಮ್ಮದು ಮೊದಲೇ ಬಡವರ ಪರ ಮಹಿಳೆಯರ ಪರವಾದ ಸರ್ಕಾರ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ. ನಮ್ಮ ರಾಜ್ಯದಲ್ಲಿ ಮಹಿಳೆಯರು ಸಾರಿಗೆ ಸ್ವಾತಂತ್ರ್ಯ ಅನುಭವಿಸುವ ಅವಕಾಶವನ್ನ ನಮ್ಮ ಸರ್ಕಾರ ಮಾಡಿಕೊಟ್ಟಿದೆ.. ಇದೇ 14 ನೇ ತಾರೀಕು ಈ ಯಶಸ್ಸನ್ನ ಸಿಹಿ ಹಂಚಿ ಮಹಿಳೆಯರೊಂದಿಗೆ ಪ್ರಯಾಣಿಸಿ ಸಂಭ್ರಮಿಸಲು ತೀರ್ಮಾನಿಸಿದ್ದೇವೆ ಎಂದರು.

ಈವರೆಗೆ ಮೈಸೂರಲ್ಲಿ ಶಕ್ತಿ ಯೋಜನೆಗೆ 776.8 ಕೋಟಿ ಹಣ ವ್ಯವವಾಗಿದೆ. ರಾಜ್ಯದಲ್ಲಿ 12000,733.80 ಕೋಟಿ ಹಣ ವ್ಯಯವಾಗಿದೆ. ಇಷ್ಟು ದೊಡ್ಡ ಮೊತ್ತವನ್ನ ಇಡೀ ದೇಶದಲ್ಲೇ ಯಾವ ಸರ್ಕಾರವೂ ಕೊಟ್ಟಿಲ್ಲ. ಈ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 14 ರಂದು ದೃಷ್ಟಿ ಹೀನರಿಗಾಗಿ ವಿಶೇಷ ಉಪಕರಣ ಅಳವಡಿಸಿರುವ ನೂತನ ಸಾರಿಗೆ ಬಸ್ ಗಳನ್ನ ಸಚಿವ ರಾಮಲಿಂಗ ರೆಡ್ಡಿ ಅವರು ಮೈಸೂರಿನಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ನಗರ ಬಸ್ ನಿಲ್ದಾಣದಲ್ಲಿ ಮೊದಲ ಹಂತದಲ್ಲಿ 200 ಬಸ್ ಲೋಕಾರ್ಪಣೆ ಆಗಲಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ ಎಂದು ಡಾ. ಪುಷ್ಪಾ ಅಮರನಾಥ್ ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!