ಬಿಗ್​ಬಾಸ್ ಸ್ಪರ್ಧಿ ರಕ್ಷಿತಾಗೆ ಕಾನೂನು ಸಂಕಷ್ಟ ಎದುರಾಗಿದೆ . ಅಶ್ವಿನಿ ಗೌಡ ವಿರುದ್ಧ ಮಾತಾಡಿದ್ದೇ ರಕ್ಷಿತಾಗೆ ತಪ್ಪಾಯ್ತಾ?

ಬಿಗ್​ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ (Rakshita Shetty) ಕಾನೂನು ಸಂಕಷ್ಟ ಎದುರಾಗಿದೆ. ಕಲಾವಿದರಿಗೆ ಅವಮಾನ ಮಾಡಿದ ಆರೋಪವನ್ನು ಅಶ್ವಿನಿ ಗೌಡ ಮಾಡಿದ್ದು, ಈ ಸಂಬಂಧ ನಗರ ಪೊಲೀಸ್ ಕಮಿಷನರ್​​ಗೆ ದೂರು ಕೊಡಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ (Rakshita Shetty) ಕಾನೂನು ಸಂಕಷ್ಟ ಎದುರಾಗಿದೆ. ಕಲಾವಿದರಿಗೆ ಅವಮಾನ ಮಾಡಿದ ಆರೋಪವನ್ನು ಅಶ್ವಿನಿ ಗೌಡ ಮಾಡಿದ್ದು, ಈ ಸಂಬಂಧ ನಗರ ಪೊಲೀಸ್ ಕಮಿಷನರ್​​ಗೆ ದೂರು ಕೊಡಲು ನಿರ್ಧಾರ ಮಾಡಲಾಗಿದೆ. ಕುಶಲ ಕಲಾ ವೃಂದದಿಂದ ಕಂಪ್ಲೆಂಟ್ ಕೊಡಲು ನಿರ್ಧಾರ ಮಾಡಿದೆ. ಅಶ್ವಿನಿ ಗೌಡ ವಾರದ ಕಥೆಯಲ್ಲಿ ಸುದೀಪ್ ಎದುರು ಈ ವಿಚಾರವನ್ನು ಉಲ್ಲೇಖ ಮಾಡಿದ್ದಾರೆ. ನಿನ್ನೆ ನಡೆದ ಕಿಚ್ಚನ ಪಂಚಾಯ್ತಿಯಲ್ಲಿ ಈ ವಿಚಾರ ಚರ್ಚೆಗೆ ಬಂದಿತ್ತು.

ಅಶ್ವಿನಿ ಗೌಡ ಮತ್ತು ಕಾವ್ಯ ಶೈವ ಕಳೆದ ವಾರ ಬಿಗ್​ಬಾಸ್ ಮನೆಯಲ್ಲಿ ಜಗಳ ಆಡುತ್ತಿದ್ದರು. ಜೋರಾಗಿ ಕಿತ್ತಾಡುವಾಗ ಕಾವ್ಯ ಪರ ಬ್ಯಾಟ್ ಬೀಸಲು ರಕ್ಷಿತಾ ಶೆಟ್ಟಿ ಬಂದಿದ್ದಾರೆ. ಆಗ ರಕ್ಷಿತಾ ಶೆಟ್ಟಿ ನಿಮ್ಮ ಧಾರಾವಾಹಿಯನ್ನು ಹೊರಗೆ ಮಾಡಿ. ಬಿಗ್​ಬಾಸ್ ಮನೆಯಲ್ಲಿ ಅಲ್ಲ ಎಂದು ಕೂಗಿದ್ದಾರೆ. ಅದಕ್ಕೆ ಅಶ್ವಿನಿ ಗೌಡ, ಬೆಟ್ಟು ಮಾಡುತ್ತ ಕಲಾವಿದರಿಗೆ ಅವಮಾನ ಮಾಡಬೇಡ ಎಂದು ರಕ್ಷಿತಾ ಕಡೆ ತಿರುಗಿದ್ದಾರೆ. ನಿಂಗೆ ಅದ್ರಲ್ಲೇ ಹೊಡೀತಾರೆ ಹುಷಾರ್ ಎಂದಿದ್ದಾರೆ. ಅದಕ್ಕೆ ರಕ್ಷಿತಾ ಗೌಡ, ಮಾಡ್ತೀನಿ, ಮಾಡ್ತೀನಿ ಎಂದು ಜೋರಾಗಿ ಕೂಗಿದ್ದಾರೆ.

ಈ ವಿಚಾರದ ಬಗ್ಗೆ ಕಾವ್ಯ ಶೈವ ಸುದೀಪ್ ಎದುರು ಸ್ಪಷ್ಟನೆ ನೀಡಿದ್ದಾರೆ. ನಾನು ಜಗಳ ಆಡಬೇಕಾದರೆ ರಕ್ಷಿತಾ ಬಂದಿದ್ದು ನಿಜ. ಇದು ಸೀರಿಯಲ್ ಅಲ್ಲ, ನಾಟಕವಾಡಬೇಡಿ ಎಂಬ ಉದ್ದೇಶದಲ್ಲಿ ರಕ್ಷಿತಾ ಹೇಳಿದ್ದಾರೆ. ಆದರೆ ಅಶ್ವಿನಿ ಅವರು ಆ ಸ್ಟೇಟ್​ಮೆಂಟ್ ಅನ್ನು ತಿರುಚಿರೋದನ್ನು ಕಣ್ಣಾರೆ ನೋಡಿದೆ. ಕಲಾವಿದರ ಬಗ್ಗೆ ಕಮ್ಮಿ ಮಾತಾಡ್ತಾ ಇದ್ದೀಯಾ.. ಕಲಾವಿದರನ್ನ ಕೆಳಗೆ ಇಟ್ಟು ಮಾತಾಡ್ತೀಯಾ ಎಂದು ಹೇಳಿದರು. ಆದರೆ ರಕ್ಷಿತಾ ಮಾತಾಡಿದ್ದ ಉದ್ದೇಶವೇ ಬೇರೆ ಆಗಿತ್ತು ಎಂದು ಕಾವ್ಯ ಹೇಳಿದ್ದಾರೆ. ಇದೀಗ ಅಶ್ವಿನಿ ಗೌಡ ಮಾಡಿದ ಆರೋಪಕ್ಕೆ ಸಂಬಂಧಿಸಿ ಕುಶಲ ಕಲಾ ವೃಂದ ರಕ್ಷಿತಾ ಶೆಟ್ಟಿ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು