ಬಿಗ್​ಬಾಸ್ ಸ್ಪರ್ಧಿ ರಕ್ಷಿತಾಗೆ ಕಾನೂನು ಸಂಕಷ್ಟ ಎದುರಾಗಿದೆ . ಅಶ್ವಿನಿ ಗೌಡ ವಿರುದ್ಧ ಮಾತಾಡಿದ್ದೇ ರಕ್ಷಿತಾಗೆ ತಪ್ಪಾಯ್ತಾ?

ಬಿಗ್​ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ (Rakshita Shetty) ಕಾನೂನು ಸಂಕಷ್ಟ ಎದುರಾಗಿದೆ. ಕಲಾವಿದರಿಗೆ ಅವಮಾನ ಮಾಡಿದ ಆರೋಪವನ್ನು ಅಶ್ವಿನಿ ಗೌಡ ಮಾಡಿದ್ದು, ಈ ಸಂಬಂಧ ನಗರ ಪೊಲೀಸ್ ಕಮಿಷನರ್​​ಗೆ ದೂರು ಕೊಡಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ (Rakshita Shetty) ಕಾನೂನು ಸಂಕಷ್ಟ ಎದುರಾಗಿದೆ. ಕಲಾವಿದರಿಗೆ ಅವಮಾನ ಮಾಡಿದ ಆರೋಪವನ್ನು ಅಶ್ವಿನಿ ಗೌಡ ಮಾಡಿದ್ದು, ಈ ಸಂಬಂಧ ನಗರ ಪೊಲೀಸ್ ಕಮಿಷನರ್​​ಗೆ ದೂರು ಕೊಡಲು ನಿರ್ಧಾರ ಮಾಡಲಾಗಿದೆ. ಕುಶಲ ಕಲಾ ವೃಂದದಿಂದ ಕಂಪ್ಲೆಂಟ್ ಕೊಡಲು ನಿರ್ಧಾರ ಮಾಡಿದೆ. ಅಶ್ವಿನಿ ಗೌಡ ವಾರದ ಕಥೆಯಲ್ಲಿ ಸುದೀಪ್ ಎದುರು ಈ ವಿಚಾರವನ್ನು ಉಲ್ಲೇಖ ಮಾಡಿದ್ದಾರೆ. ನಿನ್ನೆ ನಡೆದ ಕಿಚ್ಚನ ಪಂಚಾಯ್ತಿಯಲ್ಲಿ ಈ ವಿಚಾರ ಚರ್ಚೆಗೆ ಬಂದಿತ್ತು.

ಅಶ್ವಿನಿ ಗೌಡ ಮತ್ತು ಕಾವ್ಯ ಶೈವ ಕಳೆದ ವಾರ ಬಿಗ್​ಬಾಸ್ ಮನೆಯಲ್ಲಿ ಜಗಳ ಆಡುತ್ತಿದ್ದರು. ಜೋರಾಗಿ ಕಿತ್ತಾಡುವಾಗ ಕಾವ್ಯ ಪರ ಬ್ಯಾಟ್ ಬೀಸಲು ರಕ್ಷಿತಾ ಶೆಟ್ಟಿ ಬಂದಿದ್ದಾರೆ. ಆಗ ರಕ್ಷಿತಾ ಶೆಟ್ಟಿ ನಿಮ್ಮ ಧಾರಾವಾಹಿಯನ್ನು ಹೊರಗೆ ಮಾಡಿ. ಬಿಗ್​ಬಾಸ್ ಮನೆಯಲ್ಲಿ ಅಲ್ಲ ಎಂದು ಕೂಗಿದ್ದಾರೆ. ಅದಕ್ಕೆ ಅಶ್ವಿನಿ ಗೌಡ, ಬೆಟ್ಟು ಮಾಡುತ್ತ ಕಲಾವಿದರಿಗೆ ಅವಮಾನ ಮಾಡಬೇಡ ಎಂದು ರಕ್ಷಿತಾ ಕಡೆ ತಿರುಗಿದ್ದಾರೆ. ನಿಂಗೆ ಅದ್ರಲ್ಲೇ ಹೊಡೀತಾರೆ ಹುಷಾರ್ ಎಂದಿದ್ದಾರೆ. ಅದಕ್ಕೆ ರಕ್ಷಿತಾ ಗೌಡ, ಮಾಡ್ತೀನಿ, ಮಾಡ್ತೀನಿ ಎಂದು ಜೋರಾಗಿ ಕೂಗಿದ್ದಾರೆ.

ಈ ವಿಚಾರದ ಬಗ್ಗೆ ಕಾವ್ಯ ಶೈವ ಸುದೀಪ್ ಎದುರು ಸ್ಪಷ್ಟನೆ ನೀಡಿದ್ದಾರೆ. ನಾನು ಜಗಳ ಆಡಬೇಕಾದರೆ ರಕ್ಷಿತಾ ಬಂದಿದ್ದು ನಿಜ. ಇದು ಸೀರಿಯಲ್ ಅಲ್ಲ, ನಾಟಕವಾಡಬೇಡಿ ಎಂಬ ಉದ್ದೇಶದಲ್ಲಿ ರಕ್ಷಿತಾ ಹೇಳಿದ್ದಾರೆ. ಆದರೆ ಅಶ್ವಿನಿ ಅವರು ಆ ಸ್ಟೇಟ್​ಮೆಂಟ್ ಅನ್ನು ತಿರುಚಿರೋದನ್ನು ಕಣ್ಣಾರೆ ನೋಡಿದೆ. ಕಲಾವಿದರ ಬಗ್ಗೆ ಕಮ್ಮಿ ಮಾತಾಡ್ತಾ ಇದ್ದೀಯಾ.. ಕಲಾವಿದರನ್ನ ಕೆಳಗೆ ಇಟ್ಟು ಮಾತಾಡ್ತೀಯಾ ಎಂದು ಹೇಳಿದರು. ಆದರೆ ರಕ್ಷಿತಾ ಮಾತಾಡಿದ್ದ ಉದ್ದೇಶವೇ ಬೇರೆ ಆಗಿತ್ತು ಎಂದು ಕಾವ್ಯ ಹೇಳಿದ್ದಾರೆ. ಇದೀಗ ಅಶ್ವಿನಿ ಗೌಡ ಮಾಡಿದ ಆರೋಪಕ್ಕೆ ಸಂಬಂಧಿಸಿ ಕುಶಲ ಕಲಾ ವೃಂದ ರಕ್ಷಿತಾ ಶೆಟ್ಟಿ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!