ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಇಲ್ಲ ಎಂದ ಬಿಗ್ ಬಾಸ್ ಅತಿಥಿಗಳು

ಬಿಗ್ ಬಾಸ್ ಮನೆಗೆ ಆಗಮಿಸಿದ ಅತಿಥಿಗಳು ಗಿಲ್ಲಿಯ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹನುಮಂತನ ಶಾಂತ ಸ್ವಭಾವಕ್ಕೆ ಗಿಲ್ಲಿಯನ್ನು ಹೋಲಿಸಿದ ಅತಿಥಿಗಳು, ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಕೂಡ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ಗಿಲ್ಲಿ ಅತಿಥಿಗಳೊಂದಿಗೆ ಹಾಸ್ಯ ಮಾಡಿದರು, ಆದರೆ ಅತಿಥಿಗಳು ಅದನ್ನು ಗಂಭೀರವಾಗಿ ತೆಗೆದುಕೊಂಡರು.

 

ಕಳೆದ ಸೀಸನ್​ನಲ್ಲಿ ಹನುಮಂತ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಡೀ ಶೋ ದಿಕ್ಕನ್ನು ಬದಲಿಸಿದ್ದರು. ಹಲವು ತಿಂಗಳ ಕಾಲ ಅವರು ಭರ್ಜರಿ ಮನರಂಜನೆ ನೀಡಿದ್ದರು. ಯಾರೇ ನಾಮಿನೇಷನ್ ಮಾಡಿದರೂ ಅವರು ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆ ಬಳಿಕ ಕೋಟಿ ಮತಗಳ ಅಂತರದಲ್ಲಿ ಅವರು ಗೆಲುವು ಕಂಡರು. ಈ ಸೀಸನ್​ ಅಲ್ಲಿ ಗಿಲ್ಲಿ ಕೂಡ ರೇಸ್​ನಲ್ಲಿ ಮುಂದಿದ್ದಾರೆ. ಆದರೆ, ಹನುಮಂತನ 10 ಪರ್ಸೆಂಟ್ ಕೂಡ ಗಿಲ್ಲಿ ಇಲ್ಲ ಎಂದು ಬಿಗ್ ಬಾಸ್ (Bigg Boss)​ ಮನೆಗೆ ಬಂದ ಅತಿಥಿಗಳು ಹೇಳಿಕೆ ನೀಡಿದ್ದಾರೆ. ಬಿಗ್ ಬಾಸ್​ ಈಗ ಬಿಬಿ ಪ್ಯಾಲೇಸ್ ಆಗಿ ಬದಲಾಗಿದೆ. ಉಗ್ರಂ ಮಂಜು ಅವರು ಬ್ಯಾಚುಲರ್ ಪಾರ್ಟಿ ಮಾಡೋದಕ್ಕೆ ಆಗಮಿಸಿದ್ದಾರೆ. ಅವರ ಜೊತೆ ಮೋಕ್ಷಿತಾ ಪೈ, ರಜತ್, ಚೈತ್ರಾ ಕುಂದಾಪುರ, ತ್ರಿವಿಕ್ರಮ್ ಕೂಡ ಜೊತೆಗಿದ್ದಾರೆ. ಅವರು ಸಖತ್ ಮನರಂಜನೆ ನೀಡುತ್ತಿದ್ದಾರೆ. ಈ ವೇಳೆ ಗಿಲ್ಲಿಯನ್ನು ಅವರು ಹನುಮಂತನ ಜೊತೆ ಹೋಲಿಕೆ ಮಾಡಿ ನೋಡಿದ್ದಾರೆ.

ಅತಿಥಿಗಳ ಆತಿಥ್ಯವನ್ನು ಒಳ್ಳೆಯ ರೀತಿಯಲ್ಲಿ ಮಾಡಬೇಕು ಎಂಬುದು ಬಿಗ್ ಬಾಸ್ ಆದೇಶ ಆಗಿತ್ತು. ಆದರೆ, ಇದನ್ನು ಗಿಲ್ಲಿ ಅವರು ಗಂಭೀರವಾಗಿ ಸ್ವೀಕರಿಸಿಲ್ಲ. ಅತಿಥಿಗಳ ಕಾಲೆಳೆಯುವ ಪ್ರಯತ್ನವನ್ನು ಗಿಲ್ಲಿ ಮಾಡಿದ್ದಾರೆ. ಇದು ಅತಿಥಿಗಳ ಕೋಪಕ್ಕೆ ಕಾರಣ ಆಗಿದೆ. ರಜತ್ ಹಾಗೂ ಮಂಜು ಕರೆದು ಅನೇಕ ಬಾರಿ ವಾರ್ನ್ ಮಾಡಿದ್ದಾರೆ. ಆದರೆ, ಈ ವಾರ್ನಿಂಗ್​​ಗೆ ಎಲ್ಲ ಗಿಲ್ಲಿ ಜಗ್ಗುವವರೇ ಅಲ್ಲ. ಅವರು ತಮ್ಮ ಕೀಟಲೆ ಮುಂದುವರಿಸಿದ್ದಾರೆ. ಎಲ್ಲ ಸಂದರ್ಭದಲ್ಲೂ ಹಾಸ್ಯ ಮನಸ್ಥಿತಿಯಲ್ಲೇ ನಡೆದುಕೊಂಡಿದ್ದಾರೆ. ಈ ವಿಚಾರದ ಬಗ್ಗೆ ರಜತ್, ತ್ರಿವಿಕ್ರಂ ಮಂಜು ಮೊದಲಾದವರು ಚರ್ಚೆ ಮಾಡಿದ್ದಾರೆ. ‘ಇವನು ನಮ್ಮವನ (ಹನುಮಂತ) ರೀತಿಯೇ. ನಮ್ಮವನು ಶಾಂತವಾಗಿ ಇರ್ತಿದ್ದ. ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತ್ರ ಮಾತನಾಡುತ್ತಿದ್ದ. ಇವನು ಬಾಯಿಗೆ ಬಂದಂತೆಲ್ಲ ಮಾತನಾಡುತ್ತಿದ್ದಾನೆ’ ಎಂದು ರಜತ್ ಹೇಳಿದರು. ‘ಅವನ 10 ಪರ್ಸೆಂಟ್ ಕೂಡ ಇವನಿಲ್ಲ ಬಿಡಿ’ ಎಂದು ತ್ರಿವಿಕ್ರಂ ಅವರು ಹೇಳಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!