ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಇಲ್ಲ ಎಂದ ಬಿಗ್ ಬಾಸ್ ಅತಿಥಿಗಳು

ಬಿಗ್ ಬಾಸ್ ಮನೆಗೆ ಆಗಮಿಸಿದ ಅತಿಥಿಗಳು ಗಿಲ್ಲಿಯ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹನುಮಂತನ ಶಾಂತ ಸ್ವಭಾವಕ್ಕೆ ಗಿಲ್ಲಿಯನ್ನು ಹೋಲಿಸಿದ ಅತಿಥಿಗಳು, ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಕೂಡ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ಗಿಲ್ಲಿ ಅತಿಥಿಗಳೊಂದಿಗೆ ಹಾಸ್ಯ ಮಾಡಿದರು, ಆದರೆ ಅತಿಥಿಗಳು ಅದನ್ನು ಗಂಭೀರವಾಗಿ ತೆಗೆದುಕೊಂಡರು.

 

ಕಳೆದ ಸೀಸನ್​ನಲ್ಲಿ ಹನುಮಂತ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಡೀ ಶೋ ದಿಕ್ಕನ್ನು ಬದಲಿಸಿದ್ದರು. ಹಲವು ತಿಂಗಳ ಕಾಲ ಅವರು ಭರ್ಜರಿ ಮನರಂಜನೆ ನೀಡಿದ್ದರು. ಯಾರೇ ನಾಮಿನೇಷನ್ ಮಾಡಿದರೂ ಅವರು ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆ ಬಳಿಕ ಕೋಟಿ ಮತಗಳ ಅಂತರದಲ್ಲಿ ಅವರು ಗೆಲುವು ಕಂಡರು. ಈ ಸೀಸನ್​ ಅಲ್ಲಿ ಗಿಲ್ಲಿ ಕೂಡ ರೇಸ್​ನಲ್ಲಿ ಮುಂದಿದ್ದಾರೆ. ಆದರೆ, ಹನುಮಂತನ 10 ಪರ್ಸೆಂಟ್ ಕೂಡ ಗಿಲ್ಲಿ ಇಲ್ಲ ಎಂದು ಬಿಗ್ ಬಾಸ್ (Bigg Boss)​ ಮನೆಗೆ ಬಂದ ಅತಿಥಿಗಳು ಹೇಳಿಕೆ ನೀಡಿದ್ದಾರೆ. ಬಿಗ್ ಬಾಸ್​ ಈಗ ಬಿಬಿ ಪ್ಯಾಲೇಸ್ ಆಗಿ ಬದಲಾಗಿದೆ. ಉಗ್ರಂ ಮಂಜು ಅವರು ಬ್ಯಾಚುಲರ್ ಪಾರ್ಟಿ ಮಾಡೋದಕ್ಕೆ ಆಗಮಿಸಿದ್ದಾರೆ. ಅವರ ಜೊತೆ ಮೋಕ್ಷಿತಾ ಪೈ, ರಜತ್, ಚೈತ್ರಾ ಕುಂದಾಪುರ, ತ್ರಿವಿಕ್ರಮ್ ಕೂಡ ಜೊತೆಗಿದ್ದಾರೆ. ಅವರು ಸಖತ್ ಮನರಂಜನೆ ನೀಡುತ್ತಿದ್ದಾರೆ. ಈ ವೇಳೆ ಗಿಲ್ಲಿಯನ್ನು ಅವರು ಹನುಮಂತನ ಜೊತೆ ಹೋಲಿಕೆ ಮಾಡಿ ನೋಡಿದ್ದಾರೆ.

ಅತಿಥಿಗಳ ಆತಿಥ್ಯವನ್ನು ಒಳ್ಳೆಯ ರೀತಿಯಲ್ಲಿ ಮಾಡಬೇಕು ಎಂಬುದು ಬಿಗ್ ಬಾಸ್ ಆದೇಶ ಆಗಿತ್ತು. ಆದರೆ, ಇದನ್ನು ಗಿಲ್ಲಿ ಅವರು ಗಂಭೀರವಾಗಿ ಸ್ವೀಕರಿಸಿಲ್ಲ. ಅತಿಥಿಗಳ ಕಾಲೆಳೆಯುವ ಪ್ರಯತ್ನವನ್ನು ಗಿಲ್ಲಿ ಮಾಡಿದ್ದಾರೆ. ಇದು ಅತಿಥಿಗಳ ಕೋಪಕ್ಕೆ ಕಾರಣ ಆಗಿದೆ. ರಜತ್ ಹಾಗೂ ಮಂಜು ಕರೆದು ಅನೇಕ ಬಾರಿ ವಾರ್ನ್ ಮಾಡಿದ್ದಾರೆ. ಆದರೆ, ಈ ವಾರ್ನಿಂಗ್​​ಗೆ ಎಲ್ಲ ಗಿಲ್ಲಿ ಜಗ್ಗುವವರೇ ಅಲ್ಲ. ಅವರು ತಮ್ಮ ಕೀಟಲೆ ಮುಂದುವರಿಸಿದ್ದಾರೆ. ಎಲ್ಲ ಸಂದರ್ಭದಲ್ಲೂ ಹಾಸ್ಯ ಮನಸ್ಥಿತಿಯಲ್ಲೇ ನಡೆದುಕೊಂಡಿದ್ದಾರೆ. ಈ ವಿಚಾರದ ಬಗ್ಗೆ ರಜತ್, ತ್ರಿವಿಕ್ರಂ ಮಂಜು ಮೊದಲಾದವರು ಚರ್ಚೆ ಮಾಡಿದ್ದಾರೆ. ‘ಇವನು ನಮ್ಮವನ (ಹನುಮಂತ) ರೀತಿಯೇ. ನಮ್ಮವನು ಶಾಂತವಾಗಿ ಇರ್ತಿದ್ದ. ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತ್ರ ಮಾತನಾಡುತ್ತಿದ್ದ. ಇವನು ಬಾಯಿಗೆ ಬಂದಂತೆಲ್ಲ ಮಾತನಾಡುತ್ತಿದ್ದಾನೆ’ ಎಂದು ರಜತ್ ಹೇಳಿದರು. ‘ಅವನ 10 ಪರ್ಸೆಂಟ್ ಕೂಡ ಇವನಿಲ್ಲ ಬಿಡಿ’ ಎಂದು ತ್ರಿವಿಕ್ರಂ ಅವರು ಹೇಳಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!