ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟನ ಮೇಲೆ ಆರೋಪಗಳ ಸುರಿಮಳೆ!

ಬಿಗ್ ಬಾಸ್ ಮನೆಯಲ್ಲಿ ತಮ್ಮ ಹಾಸ್ಯದಿಂದ ಹವಾ ಸೃಷ್ಟಿಸಿದ್ದ ಗಿಲ್ಲಿ ನಟ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಪಂದನಾ, ಅಶ್ವಿನಿ, ಹಾಗೂ ಜೋಡಿ ಕಾವ್ಯಾ ಶೈವ ಸೇರಿದಂತೆ ಹಲವು ಸ್ಪರ್ಧಿಗಳು ಅವರ ವಿರುದ್ಧ ನಂಬಿಕೆ ದ್ರೋಹ ಮತ್ತು ಸ್ವಾರ್ಥದಂತಹ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

 

ಗಿಲ್ಲಿ ಹವಾ
ಬಿಗ್​ಬಾಸ್​ (Bigg Boss)ನಲ್ಲಿ ಸದ್ಯ ಗಿಲ್ಲಿ ನಟನ ಹವಾ ಜೋರಾಗಿಯೇ ನಡೆಯುತ್ತಿದೆ. ಇವರೇ ಈ ಬಾರಿಯ ವಿನ್ನರ್​ ಎನ್ನುವಷ್ಟರ ಮಟ್ಟಿಗೆ ಇವರು ಹವಾ ಸೃಷ್ಟಿಸಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿಯೂ ಗಿಲ್ಲಿ ನಟನ ಬಗ್ಗೆ ದನಿ ಜೋರಾಗಿಯೇ ನಡೆಯುತ್ತಿದೆ.

ಹಾಸ್ಯದಿಂದ ತಿರುಗೇಟು
ತಮ್ಮ ಹಾಸ್ಯದಿಂದಲೇ ಎಲ್ಲರ ಮನಸ್ಸನ್ನು ಗೆದ್ದವರು ಗಿಲ್ಲಿ ನಟ. ಕಾವ್ಯಾ ಜೊತೆ ರೊಮಾನ್ಸ್, ತಮ್ಮನ್ನು ಟೀಕಿಸಲು ಬರುವ ಅಶ್ವಿನಿ ಗೌಡ ಅವರಿಗೂ ಹಾಸ್ಯದಿಂದಲೇ ತಿರುಗೇಟು ನೀಡುವಲ್ಲಿ ಗಿಲ್ಲಿ ನಿಸ್ಸೀಮರು.

ಟಾರ್ಗೆಟ್​ ಆದ ಗಿಲ್ಲಿ
ಇಂತಿಪ್ಪ ಗಿಲ್ಲಿಯನ್ನು ಈಗ ಎಲ್ಲರೂ ಟಾರ್ಗೆಟ್​ ಮಾಡಿದ್ದಾರೆ. ಇವರ ವಿರುದ್ಧ ಆರೋಪಗಳ ಸುರಿಮಳೆಯೇ ಆಗುತ್ತಿದೆ. ಇವರು ನನ್ನ ಟಾರ್ಗೆಟ್​ ಎಂದು ಯಾರು ಹೇಳುತ್ತೀರಿ ಎನ್ನುವ ಪ್ರಶ್ನೆಯನ್ನು ಸುದೀಪ್​ ಎದುರಿಗಿಟ್ಟಿದ್ದಾರೆ.

ನಂಬಿಕೆ ಇಟ್ಟು ಮೋಸ
ಆಗ ಗಿಲ್ಲಿ ವಿರುದ್ಧ ಕೆಲವರು ಆರೋಪ ಮಾಡಿದ್ದಾರೆ. ಗಿಲ್ಲಿ ನಂಬಿಕೆ ಇಟ್ಟು ಮೋಸ ಮಾಡ್ತಾರೆ. ಇದರಲ್ಲಿ ಅವರದ್ದು ಎತ್ತಿದ ಕೈ ಎಂದು ಎಂದು ಸ್ಪಂದನಾ ಸೋಮಣ್ಣ ಹೇಳಿದರು.

ಧನುಷ್​ ಏನಂದ್ರು?
ಅವನು ಕಾಮಿಡಿ ಮಾಡ್ತಾನೆ. ವಾಪಸ್​ ನಾವು ಮಾಡಿದ್ರೆ ಸೀರಿಯಸ್​ ಆಗಿ ತೆಗೆದುಕೊಳ್ತಾನೆ ಎಂದು ಧನುಷ್​ ಅಭಿಪ್ರಾಯ ಪಟ್ಟರು.

ನಾನು ಪರ್ಸನಲ್​ ಆಗಿ ಟಾರ್ಗೆಟ್​
ಈ ಮನೆಗೆ ಕಾಲಿಟ್ಟಾಗಿನಿಂದಲೂ ಗಿಲ್ಲಿ ನನ್ನನ್ನು ಪರ್ಸನಲ್​ ಆಗಿ ಟಾರ್ಗೆಟ್​ ಮಾಡ್ತಾ ಇದ್ದಾರೆ ಎನ್ನಿಸ್ತಿದೆ, ಗೇಮ್​ ಅಂತ ಬಂದಾಗಲು ಕೂಡ ತುಂಬಾ ಸ್ವಾರ್ಥಿ ಎಂದು ಅಶ್ವಿನಿ ಗೌಡ ಕೋಪದಿಂದ ನುಡಿದರು.

ವಿಭಿನ್ನ ಪರ್ಸನ್ಯಾಲಿಟಿ
ಜಂಟಿಯಾಗಿ ಬಂದಾಗ ಎರಡು ವಿಭಿನ್ನ ಪರ್ಸನ್ಯಾಲಿಟಿ. ಅವರು ಸೂಪರ್​ ಆ್ಯಕ್ಟೀವ್​ ಇದ್ದಾರೆ, ಆದರೆ ನನ್ನ ಒಂದು ಸ್ಟ್ಯಾಂಡ್ ಕಾಣಿಸ್ತಾ ಇರಲಿಲ್ಲ, ಹಾಗಾಗಿ ನಾನು ಕೂಡ ಗಿಲ್ಲಿ ವಿರುದ್ಧ ಎಂದಿದ್ದಾರೆ ಕಾವ್ಯಾ ಶೈವ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!