ಬಿಗ್​​ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್

ಬಿಗ್​​ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ನಟ ಸುದೀಪ್ ಅವರು ಬಿಗ್​ಬಾಸ್ ಕನ್ನಡ ಸೀಸನ್ 12ರ ಪ್ರಾರಂಭದ ದಿನಾಂಕ ಘೋಷಣೆ ಮಾಡಿದ್ದಾರೆ.

ಎಲ್ಲೆಡೆ ಬಿಗ್​ಬಾಸ್ ಸೀಸನ್ ಪ್ರಾರಂಭವಾಗಿದೆ. ಹಿಂದಿ ಬಿಗ್​​ಬಾಸ್ ಕಳೆದ ವಾರವಷ್ಟೆ ಪ್ರಾರಂಭವಾಗಿದೆ. ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ಸುದೀಪ್ ಅವರು ಬಿಗ್​​ಬಾಸ್ ಸೀಸನ್ 12 ಪ್ರಾರಂಭವಾಗುವ ದಿನಾಂಕವನ್ನು ಘೋಷಣೆ ಮಾಡಿಬಿಟ್ಟಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಸುದೀಪ್ ಈ ಬಾರಿಯ ಬಿಗ್​​ಬಾಸ್ ಪ್ರಾರಂಭದ ದಿನಾಂಕ ಯಾವುದೆಂದು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಇನ್ನೂ ಹಲವು ಗಣ್ಯರು ಭಾಗಿ ಆಗಿದ್ದರು. ಇದೇ ಕಾರ್ಯಕ್ರಮದಲ್ಲಿ ನಟ ಸುದೀಪ್ ಸಹ ಅತಿಥಿಯಾಗಿ ಭಾಗಿ ಆಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಸುದೀಪ್ ಬಿಗ್​​ಬಾಸ್ ಬಗ್ಗೆಯೂ ಮಾತನಾಡಿದರು.

 

ಅಭಿಮಾನಿಗಳ ಕೂಗಾಟ, ಚಪ್ಪಾಳೆ, ಶಿಳ್ಳೆಗಳ ನಡುವೆ ಮಾತನಾಡಿದ ಸುದೀಪ್, ‘ಶೀಘ್ರವೇ ತೆರೆ ಮೇಲೆ ಬರಲಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಆಶೀರ್ವಾದ ಮಾಡಿ’ ಎಂದರು. ಆ ಮೂಲಕ ಬಿಗ್​​ಬಾಸ್ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ ಎಂದು ಘೋಷಣೆ ಮಾಡಿದರು. ಈ ಬಾರಿಯೂ ಸುದೀಪ್ ಅವರೇ ಬಿಗ್​​ಬಾಸ್ ನ ನಿರೂಪಣೆ ಮಾಡಲಿದ್ದು, ದಿನಾಂಕವನ್ನೂ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಬಿಗ್​​ಬಾಸ್ ಸೀಸನ್ 11 ಸೆಪ್ಟೆಂಬರ್ 29ರಂದು ಪ್ರಾರಂಭವಾಗಿತ್ತು. ಈ ಬಾರಿ ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ. ಮೂಲಗಳ ಪ್ರಕಾರ ಈಗಾಗಲೇ ಬಹುತೇಕ ಸ್ಪರ್ಧಿಗಳ ಆಯ್ಕೆ ಆಗಿದ್ದು, ಕೆಲವರ ಆಯ್ಕೆಯಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ಕಳೆದ ಸೀಸನ್ ನಿರೂಪಣೆ ಮಾಡುವಾಗ ತಾವು ಇನ್ನು ಮುಂದೆ ಬಿಗ್​​ಬಾಸ್ ನಿರೂಪಣೆ ಮಾಡುವುದಿಲ್ಲ ಇದೇ ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಆಯೋಜಕರು ಸುದೀಪ್ ಅವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ. ಆಯೋಜಕರ ಒತ್ತಡಕ್ಕೆ ಮಣಿದು ಸುದೀಪ್ ಅವರು ಬಿಗ್​​ಬಾಸ್ ನಿರೂಪಣೆಗೆ ಒಪ್ಪಿಗೆ ನೀಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!