BJP ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹ* ಕೇಸ್: CM ಕಾನೂನು ಸಲಹೆಗಾರರ ವಿರುದ್ಧ ದೂರು.

ಬೆಂಗಳೂರು :- ಬಿಜೆಪಿ (BJP) ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ತೆನ್ನೀರ ಮಹಿನಾ, ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿನಯ್ ಸೋಮಯ್ಯ ಸಹೋದರ ಜೀವನ್ ಅವರು “ನನ್ನ ಸಹೋದರನಿಗೆ ಕಿರುಕುಳ ನೀಡಿದ್ದಾರೆ” ಎಂದು ಪೊಲೀಸರಿಗೆ 6 ಪುಟಗಳ ದೂರನ್ನು ಸಲ್ಲಿಸಿದ್ದಾರೆ.


ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾತನಾಡಿ, ಈ ಘಟನೆಯಿಂದ ನಿಜಕ್ಕೂ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ‘ಕೈ’ ಶಾಸಕರು, ತನ್ನೀರ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲಿಷರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ಗೆಆ*ಹತ್ಯೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.
ಇನ್ನು, ಮೃತ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಮಡಿಕೇರಿಯಲ್ಲಿನ ಮನೆಗೆ ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತ ವಿನಯ್ ಆ*ಹತ್ಯೆಗೆ ಕಾರಣವಾದವರನ್ನು ಬಂಧಿಸುವಂತೆ ಮಡಿಕೇರಿಯ ಜ.ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ ಗೌಡ ಮತ್ತು ಕಾಂಗ್ರೆಸ್ ವಕ್ತಾರ ತೆನ್ನೀರಾ ಮಹಿನಾ ಬಂಧಿಸಿವಂತೆ ಆಗ್ರಹಸಿದರು. ಅಲ್ಲದೇ, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ವಿರುದ್ಧವೂ ಧಿಕ್ಕಾರ ಕೂಗಿದರು. ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ ಗೌಡ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ವಿಚಾರ ತಿಳಿದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎಸ್ ರಾಮರಾಜನ್ ಬಿಜೆಪಿ ಕಾರ್ಯಕರ್ತರ ಮನವೊಲಿಸಿದರು. ಎಸ್ಪಿ ಮನವೊಲಿಕೆ ಬಳಿಕ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!