ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.
ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಕ್ಷಮೆಯಾಚಿಸಿದ್ದಾರೆ. ತಾಯಿ ಎದುರು ಕುಳಿತು ತಲೆಬಾಗಿ ಕ್ಷಮೆ ಕೇಳಿರುವ ಕೆಲ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು. ಅದರಂತೆ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆಯಾಚಿಸಿದ್ದಾರೆ.
ʼಗೋವಾ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ರಣವೀರ್‌ ಸಿಂಗ್‌ ನಟ ರಿಷಬ್‌ ಶೆಟ್ಟಿ ಮುಂದೆಯೇ ಮಾತನಾಡಿದ್ದರು. ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್‌ ಸಿಂಗ್‌ ಅನುಕರಣೆ ಮಾಡಿದ್ದರು. ರಣವೀರ್‌ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು.

Related Posts

ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್ ನಿರ್ಲಕ್ಷ್ಯ! ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ, ಪರಿಹಾರಕ್ಕೆ ಒತ್ತಾಯ!

ಮೈಸೂರು : ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್‌ನಲ್ಲಿ ಒಂದು ಸಣ್ಣ ರಿಪೇರಿಗೆ ನಿಲ್ಲಿಸಿದ್ದ ಲಾರಿಯನ್ನು 9 ತಿಂಗಳಾದರೂ ರಿಪೇರಿ ಮಾಡಿ ನೀಡದ ಕಾರಣ ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ ಉಂಟಾಗಿರುವ ಘಟನೆ ನಡೆದಿದ್ದು, ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್‌ನವರು…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

You Missed

ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್ ನಿರ್ಲಕ್ಷ್ಯ! ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ, ಪರಿಹಾರಕ್ಕೆ ಒತ್ತಾಯ!

ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್ ನಿರ್ಲಕ್ಷ್ಯ! ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ, ಪರಿಹಾರಕ್ಕೆ ಒತ್ತಾಯ!

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಕ್ವಾಲಿಫೈಯರ್ ಆಡದೆಯೇ  ಆರ್‌ಸಿಬಿ ಫೈನಲ್ ತಲುಪಬಹುದು..!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

RTI ಕಾರ್ಯಕರ್ತ ಗಂಗರಾಜು  ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

ವಾಹನ ಸವಾರರಿಗೆ ಇಂಧನ ಬೆಲೆ ಏರಿಕೆ ಬರೆ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಈಗ ಸಿಎನ್‌ಜಿ ದರವೂ ದುಬಾರಿ!

ವಾಹನ ಸವಾರರಿಗೆ ಇಂಧನ ಬೆಲೆ ಏರಿಕೆ ಬರೆ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಈಗ ಸಿಎನ್‌ಜಿ ದರವೂ ದುಬಾರಿ!

ಗುರುಗಳಾದ KR ಸುಬ್ಬು ಕೃಷ್ಣ ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ ದತ್ತಿ ಪ್ರಶಸ್ತಿ

ಗುರುಗಳಾದ KR ಸುಬ್ಬು ಕೃಷ್ಣ  ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ  ದತ್ತಿ ಪ್ರಶಸ್ತಿ