ಬೋಲ್ಟ್ ದಾಖಲೆ ಪುಡಿಪುಡಿ: ವಿಶ್ವದ ಗಮನ ಸೆಳೆದ 18ರ ಹರೆಯದ ಓಟಗಾರ ಗೌಟ್ ಗೌಟ್!

ಸಿಡ್ನಿ: ಕ್ರೀಡಾಲೋಕದ ಸಾರ್ವಕಾಲಿಕ ಶ್ರೇಷ್ಠ ಓಟಗಾರ ಉಸೇನ್ ಬೋಲ್ಟ್ ಅವರ ದಶಕಗಳ ಕಾಲದ ದಾಖಲೆಯೊಂದನ್ನು ಆಸ್ಟ್ರೇಲಿಯಾದ 18 ವರ್ಷದ ಉದಯೋನ್ಮುಖ ಪ್ರತಿಭೆ ಗೌಟ್ ಗೌಟ್ ಅಳಿಸಿಹಾಕಿದ್ದಾರೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಮಿಂಚಿನ ವೇಗ ಪ್ರದರ್ಶಿಸಿದ ಗೌಟ್ ಗೌಟ್, ಕೇವಲ 19.67 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಮೂಲಕ 200 ಮೀಟರ್ ಓಟದಲ್ಲಿ ಇಷ್ಟು ಕಡಿಮೆ ಅವಧಿಯಲ್ಲಿ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಈ ಹಿಂದೆ ವಿಶ್ವ ದಾಖಲೆ ವೀರ ಉಸೇನ್ ಬೋಲ್ಟ್ ಅವರು 23 ವರ್ಷ ತುಂಬುವ ಮುನ್ನ 200 ಮೀಟರ್ ಓಟವನ್ನು 19.93 ಸೆಕೆಂಡ್‌ಗಳಲ್ಲಿ ಕ್ರಮಿಸಿ ದಾಖಲೆ ಬರೆದಿದ್ದರು. ಆದರೆ ಗೌಟ್ ಗೌಟ್ ಅವರು ಬೋಲ್ಟ್‌ಗಿಂತಲೂ ವೇಗವಾಗಿ ಗುರಿ ತಲುಪುವ ಮೂಲಕ ಕ್ರೀಡಾ ಜಗತ್ತನ್ನು ಬೆರಗುಗೊಳಿಸಿದ್ದಾರೆ. ಕಳೆದ ವರ್ಷವಷ್ಟೇ 20.02 ಸೆಕೆಂಡ್‌ಗಳಲ್ಲಿ ಓಡಿ ಗಮನ ಸೆಳೆದಿದ್ದ ಈ ಯುವಕ, ಈಗ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಅಡಿನಂ ಮಾರ್ಫಿ (19.88 ಸೆಕೆಂಡ್) ದ್ವಿತೀಯ ಸ್ಥಾನ ಹಾಗೂ ಕ್ಯಾಲನ್ ಲಾ (20.21 ಸೆಕೆಂಡ್) ತೃತೀಯ ಸ್ಥಾನ ಪಡೆದಿದ್ದಾರೆ. ಈ ಸಾಧನೆಯೊಂದಿಗೆ ಗೌಟ್ ಗೌಟ್ ಅವರನ್ನು ಅಥ್ಲೆಟಿಕ್ಸ್ ಲೋಕದ ‘ಮುಂದಿನ ಬೋಲ್ಟ್’ ಎಂದೇ ಬಣ್ಣಿಸಲಾಗುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!