ಸೋದರಮಾವನಿಂದಲೇ ಕೊ*ಯಾದ ಬಾಲಕ ! ಕಾರಣವಾಯ್ತ ಫ್ರೀಫೈರ್ ಗೇಮ್​​ ಅಡಿಕ್ಷನ್ ?

ಬೆಂಗಳೂರು: ಫ್ರೀಫೈರ್ ಗೇಮ್​ ಚಟಕ್ಕೆ ಬಿದ್ದ14 ವರ್ಷದ ಬಾಲಕನನ್ನು ಆತನ ಮಾವನೇ ಕೊಲೆ ಮಾಡಿರುವಂತಹ ಭೀಕರ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ. ಸದ್ಯ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ನೆಲಮಂಗಲ, ಆಗಸ್ಟ್​ 08: ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವ ಕೊಲೆ (kill) ಮಾಡಿರುವಂತಹ ಘಟನೆ ಬೆಂಗಳೂರಿನ (bangaluru) ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ. ಸದ್ಯ ಪೊಲೀಸರು ಮಾವ ನಾಗಪ್ರಸಾದ್(50) ನನ್ನು ಬಂಧಿಸಿದ್ದಾರೆ. ಮೃತ ಬಾಲಕ ನಾಗಪ್ರಸಾದ್ ಸಹೋದರಿ ಶಿಲ್ಪಾ ಮಗ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

https://www.goodnews24x7.com/do-you-know-why-green-bangles-are-given-to-the-elders-on-the-day-of-varamahalakshmi-festival/ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?

ನಡೆದದ್ದೇನು?
ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.

ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್​, ನಂತರ ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್​​ನಲ್ಲಿ 3 ದಿನ ಕಾಲಕಳೆದಿದ್ದಾರೆ. ನಂತರ ಸೋಲದೇವನಹಳ್ಳಿ ಠಾಣೆಗೆ ಹೋಗಿ ಶರಣಾಗಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!