ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ!

ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

https://www.facebook.com/reel/3798106020489452

ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಆಸ್ಪತ್ರೆಯಲ್ಲಿಯೇ ಸಮಾರಂಭ ನಡೆಸಬೇಕೆಂದು ವರನ ಕುಟುಂಬ ಮನವಿ ಮೇರೆಗೆ ಇಲ್ಲಿಯೇ ಮದುವೆ ನಡೆಸಿದ್ದೇವೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇಂದು (ಶನಿವಾರ) ಅವನಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸುಧೀಶ್ ಕರುಣಾಕರನ್ ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!