ಬೂಕರ್ ಪ್ರಶಸ್ತಿ ವಿಜೇತೆಯಿಂದ ದಸರಾ ಉದ್ಘಾಟನೆ ! ಸೋನಿಯಾ ಗಾಂಧಿ ಪ್ರಸ್ತಾಪ ಇಲ್ಲ:

ಸೆ.22 ರಂದು ಚಾಮುಂಡಿಬೆಟ್ಟದಲ್ಲಿ ಅಗ್ರಪೂಜೆಯೊಂದಿಗೆ ದಸರಾ ಉದ್ಘಾಟನೆ; ಅ.2ಕ್ಕೆ ಜಂಬೂ ಸವಾರಿ

ಬೆಂಗಳೂರು – ಈ ಬಾರಿಯ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ, ಹಾಸನ ಮೂಲದ ಬಾನು ಮುಷ್ತಾಕ್ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರ ‘ಎದೆಯ ಹಣತೆ’ (ಹಾರ್ಟ್ ಲ್ಯಾಂಪ್) ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಕನ್ನಡಿಗರೊಬ್ಬರಿಗೆ ಈ ಪ್ರಶಸ್ತಿ ಬಂದಿರು ವುದು ಸಂತಸದ ಸಂಗತಿ ಯಾಗಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಅವರೊಂದಿಗೆ ಈ ಕುರಿತು ಚರ್ಚಿಸಿದ್ದು, ಅವರಿಗೆ ಸಂಪ್ರದಾಯದಂತೆ ಜಿಲ್ಲಾಡಳಿತ ಆಹ್ವಾನ ನೀಡಲಿದೆ ಎಂದರು.
ಕರ್ನಾಟಕದ ಮಹಿಳೆಯೊಬ್ಬರಿಗೆ ಬೂಕರ್ ಪ್ರಶಸ್ತಿ ದೊರೆತಿರುವುದು ಹೆಮ್ಮೆ ವಿಷಯ. ಬಾನು ಮುಸ್ತಾಕ್ ರೈತ ಸಂಘ, ಕನ್ನಡ ಪರ ಚಳವಳಿಗಳಲ್ಲಿ ಭಾಗವಹಿಸಿದ್ದು, ಪ್ರಗತಿ ಪರ ಚಿಂತನೆ ಉಳ್ಳವರು. ಇಂತಹ ಮಹಿಳೆಯಿಂದ ನಾವು ಈ ಬಾರಿಯ ದಸರಾ ಉದ್ಘಾಟನೆ ಮಾಡಿಸುತ್ತಿದ್ದೇವೆ.

ಸೆಪ್ಟೆಂಬರ್ 22 ರಂದು ಚಾಮುಂಡಿ ಬೆಟ್ಟದಲ್ಲಿ ಅಗ್ರ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿ ದಸರಾ ಮಹೋತ್ಸವ 10 ದಿನಗಳಿಗೆ ಬದಲಾಗಿ ಪಂಚಾಂಗ ಪ್ರಕಾರ 11 ದಿನ ಜರುಗಲಿದೆ, ಅಕ್ಟೋಬರ್ 2ರಂದು ವಿಜಯ ದಶಮಿ ಆಚರಣೆ ಮೂಲಕ ದಸರಾ ಮಹೋತ್ಸವ ಮುಕ್ತಾಯಗೊಳ್ಳಲಿದೆ.

ಸೋನಿಯಾ ಗಾಂಧಿ ಪ್ರಸ್ತಾಪ ಇಲ್ಲ:
ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಕಾರ್ಯಾಲಯ ಪತ್ರಿಕಾ ಹೇಳಿಕೆ ನೀಡಿ, ಸೋನಿಯಾ ಗಾಂಧಿ ಅವರಿಂದ ದಸರಾ ಉದ್ಘಾಟನೆಗೆ ಮನವಿ ಮಾಡಲಾಗಿದೆ ಎಂಬುದು ಸರಿಯಲ್ಲ. ಕೆಲವು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು, ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲೀ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸುತ್ತಿರುವ ಕರುನಾಡಿನ ಹಿರಿಯ ಲೇಖಕಿ ಎಸ್.ಕೆ.ಬಾನು ಮುಷ್ತಾಕ್ ಸಣ್ಣ ಕಥಾ ಸಂಕಲನ “ಹಾರ್ಟ್ ಲ್ಯಾಂಪ್” (ಎದೆಯ ಹಣತೆ) ಕೃತಿಗೆ 2025ನೇ ಸಾಲಿನ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೀಪಾ ಭಕ್ತಿ ಅವರು ಎದೆಯ ಹಣತೆ ಕನ್ನಡ ಪುಸ್ತಕವನ್ನು ಇಂಗ್ಲಿಷ್‌ ಗೆ ಅನುವಾದಿಸಿ ಅದಕ್ಕೆ ‘ಹಾರ್ಟ್ ಲ್ಯಾಂಪ್’ ಹೆಸರಿಟ್ಟಿದ್ದರು. ಇತ್ತೀಚಿಗೆ ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೂಲತಃ ಹಾಸನದವರಾದ ಬಾನು ಮುಷ್ಕಾಕ್ ಅವರು 1948, ಏಪ್ರಿಲ್ 3 ರಂದು ಮುಸ್ಲಿಂ ಸಮುದಾಯದಲ್ಲಿ ಜನಿಸಿದರು. 8 ವರ್ಷವಿದ್ದಾಗ ಶಿವಮೊಗ್ಗದ ಕನ್ನಡ ಭಾಷೆಯ ಮಿಷನರಿ ಶಾಲೆಗೆ ದಾಖಲಾದರು. ಮಾತೃ ಭಾಷೆ ಉರ್ದುವಾದರೂ ಬಾನು ಮುಷ್ಕಾಕ್ ಅವರಿಗೆ ಕನ್ನಡ ಭಾಷೆಯ ಮೇಲೆ ಹಿಡಿತವಿದೆ. ಈ ಹಿನ್ನೆಲೆ ಬಹಳಷ್ಟು ಲೇಖನಗಳನ್ನು ಬರೆದಿದ್ದು, ಹಿಂದಿ, ಉರ್ದು, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗೆ ಅನುವಾದವಾಗಿದೆ.

ಬಾನು ಮುಷ್ತಾಕ್ ಅವರು ಮೂಲಭೂತವಾದ ಹಾಗೂ ಸಾಮಾಜಿಕ ಅನ್ಯಾಯದ ವಿರುದ್ಧ 1980 ರಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ. ಮುಸ್ಲಿಂ ಮಹಿಳೆಯರ ಮಸೀದಿಗಳ ಪ್ರವೇಶ ಹಕ್ಕಿನ ಪ್ರತಿಪಾದನೆಗಾಗಿ 2000ನೇ ಇಸವಿಯಲ್ಲಿ ಬಾನು ಮುಸ್ತಾಕ್ ಅವರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಯಿತು. ಪ್ರಾಣ ಬೆದರಿಕೆಗಳು ಬಂದವು. ಆದರೆ ಬಾನು ಮುಷ್ಕಾಕ್ ಇದಕ್ಕೆಲ್ಲಾ ಹೆದರದೆ, ಮೂಲಭೂತವಾದದ ವಿರುದ್ಧ ಈ ತನಕ ಹೋರಾಟ ನಡೆಸುತ್ತಾ ಬಂದಿದ್ದಾರೆ. ಸಾಹಿತಿ, ಹೋರಾಟ ಗಾರ್ತಿಯೂ ಆಗಿರುವ ಬಾನು ಮುಷ್ಕಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡಲಿದ್ದು, ಆ ವೇಳೆ ಅವರ ಸಂದೇಶ ಬಹಳ ನಿರೀಕ್ಷೆ ಮೂಡಿಸಿದೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!