ಬೂಕರ್ ಪ್ರಶಸ್ತಿ ವಿಜೇತೆಯಿಂದ ದಸರಾ ಉದ್ಘಾಟನೆ ! ಸೋನಿಯಾ ಗಾಂಧಿ ಪ್ರಸ್ತಾಪ ಇಲ್ಲ:

ಸೆ.22 ರಂದು ಚಾಮುಂಡಿಬೆಟ್ಟದಲ್ಲಿ ಅಗ್ರಪೂಜೆಯೊಂದಿಗೆ ದಸರಾ ಉದ್ಘಾಟನೆ; ಅ.2ಕ್ಕೆ ಜಂಬೂ ಸವಾರಿ

ಬೆಂಗಳೂರು – ಈ ಬಾರಿಯ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ, ಹಾಸನ ಮೂಲದ ಬಾನು ಮುಷ್ತಾಕ್ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರ ‘ಎದೆಯ ಹಣತೆ’ (ಹಾರ್ಟ್ ಲ್ಯಾಂಪ್) ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಕನ್ನಡಿಗರೊಬ್ಬರಿಗೆ ಈ ಪ್ರಶಸ್ತಿ ಬಂದಿರು ವುದು ಸಂತಸದ ಸಂಗತಿ ಯಾಗಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಅವರೊಂದಿಗೆ ಈ ಕುರಿತು ಚರ್ಚಿಸಿದ್ದು, ಅವರಿಗೆ ಸಂಪ್ರದಾಯದಂತೆ ಜಿಲ್ಲಾಡಳಿತ ಆಹ್ವಾನ ನೀಡಲಿದೆ ಎಂದರು.
ಕರ್ನಾಟಕದ ಮಹಿಳೆಯೊಬ್ಬರಿಗೆ ಬೂಕರ್ ಪ್ರಶಸ್ತಿ ದೊರೆತಿರುವುದು ಹೆಮ್ಮೆ ವಿಷಯ. ಬಾನು ಮುಸ್ತಾಕ್ ರೈತ ಸಂಘ, ಕನ್ನಡ ಪರ ಚಳವಳಿಗಳಲ್ಲಿ ಭಾಗವಹಿಸಿದ್ದು, ಪ್ರಗತಿ ಪರ ಚಿಂತನೆ ಉಳ್ಳವರು. ಇಂತಹ ಮಹಿಳೆಯಿಂದ ನಾವು ಈ ಬಾರಿಯ ದಸರಾ ಉದ್ಘಾಟನೆ ಮಾಡಿಸುತ್ತಿದ್ದೇವೆ.

ಸೆಪ್ಟೆಂಬರ್ 22 ರಂದು ಚಾಮುಂಡಿ ಬೆಟ್ಟದಲ್ಲಿ ಅಗ್ರ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿ ದಸರಾ ಮಹೋತ್ಸವ 10 ದಿನಗಳಿಗೆ ಬದಲಾಗಿ ಪಂಚಾಂಗ ಪ್ರಕಾರ 11 ದಿನ ಜರುಗಲಿದೆ, ಅಕ್ಟೋಬರ್ 2ರಂದು ವಿಜಯ ದಶಮಿ ಆಚರಣೆ ಮೂಲಕ ದಸರಾ ಮಹೋತ್ಸವ ಮುಕ್ತಾಯಗೊಳ್ಳಲಿದೆ.

ಸೋನಿಯಾ ಗಾಂಧಿ ಪ್ರಸ್ತಾಪ ಇಲ್ಲ:
ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಕಾರ್ಯಾಲಯ ಪತ್ರಿಕಾ ಹೇಳಿಕೆ ನೀಡಿ, ಸೋನಿಯಾ ಗಾಂಧಿ ಅವರಿಂದ ದಸರಾ ಉದ್ಘಾಟನೆಗೆ ಮನವಿ ಮಾಡಲಾಗಿದೆ ಎಂಬುದು ಸರಿಯಲ್ಲ. ಕೆಲವು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು, ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲೀ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸುತ್ತಿರುವ ಕರುನಾಡಿನ ಹಿರಿಯ ಲೇಖಕಿ ಎಸ್.ಕೆ.ಬಾನು ಮುಷ್ತಾಕ್ ಸಣ್ಣ ಕಥಾ ಸಂಕಲನ “ಹಾರ್ಟ್ ಲ್ಯಾಂಪ್” (ಎದೆಯ ಹಣತೆ) ಕೃತಿಗೆ 2025ನೇ ಸಾಲಿನ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೀಪಾ ಭಕ್ತಿ ಅವರು ಎದೆಯ ಹಣತೆ ಕನ್ನಡ ಪುಸ್ತಕವನ್ನು ಇಂಗ್ಲಿಷ್‌ ಗೆ ಅನುವಾದಿಸಿ ಅದಕ್ಕೆ ‘ಹಾರ್ಟ್ ಲ್ಯಾಂಪ್’ ಹೆಸರಿಟ್ಟಿದ್ದರು. ಇತ್ತೀಚಿಗೆ ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೂಲತಃ ಹಾಸನದವರಾದ ಬಾನು ಮುಷ್ಕಾಕ್ ಅವರು 1948, ಏಪ್ರಿಲ್ 3 ರಂದು ಮುಸ್ಲಿಂ ಸಮುದಾಯದಲ್ಲಿ ಜನಿಸಿದರು. 8 ವರ್ಷವಿದ್ದಾಗ ಶಿವಮೊಗ್ಗದ ಕನ್ನಡ ಭಾಷೆಯ ಮಿಷನರಿ ಶಾಲೆಗೆ ದಾಖಲಾದರು. ಮಾತೃ ಭಾಷೆ ಉರ್ದುವಾದರೂ ಬಾನು ಮುಷ್ಕಾಕ್ ಅವರಿಗೆ ಕನ್ನಡ ಭಾಷೆಯ ಮೇಲೆ ಹಿಡಿತವಿದೆ. ಈ ಹಿನ್ನೆಲೆ ಬಹಳಷ್ಟು ಲೇಖನಗಳನ್ನು ಬರೆದಿದ್ದು, ಹಿಂದಿ, ಉರ್ದು, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗೆ ಅನುವಾದವಾಗಿದೆ.

ಬಾನು ಮುಷ್ತಾಕ್ ಅವರು ಮೂಲಭೂತವಾದ ಹಾಗೂ ಸಾಮಾಜಿಕ ಅನ್ಯಾಯದ ವಿರುದ್ಧ 1980 ರಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ. ಮುಸ್ಲಿಂ ಮಹಿಳೆಯರ ಮಸೀದಿಗಳ ಪ್ರವೇಶ ಹಕ್ಕಿನ ಪ್ರತಿಪಾದನೆಗಾಗಿ 2000ನೇ ಇಸವಿಯಲ್ಲಿ ಬಾನು ಮುಸ್ತಾಕ್ ಅವರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಯಿತು. ಪ್ರಾಣ ಬೆದರಿಕೆಗಳು ಬಂದವು. ಆದರೆ ಬಾನು ಮುಷ್ಕಾಕ್ ಇದಕ್ಕೆಲ್ಲಾ ಹೆದರದೆ, ಮೂಲಭೂತವಾದದ ವಿರುದ್ಧ ಈ ತನಕ ಹೋರಾಟ ನಡೆಸುತ್ತಾ ಬಂದಿದ್ದಾರೆ. ಸಾಹಿತಿ, ಹೋರಾಟ ಗಾರ್ತಿಯೂ ಆಗಿರುವ ಬಾನು ಮುಷ್ಕಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡಲಿದ್ದು, ಆ ವೇಳೆ ಅವರ ಸಂದೇಶ ಬಹಳ ನಿರೀಕ್ಷೆ ಮೂಡಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!