ಬೂಕರ್ ಪ್ರಶಸ್ತಿ ವಿಜೇತೆಯಿಂದ ದಸರಾ ಉದ್ಘಾಟನೆ ! ಸೋನಿಯಾ ಗಾಂಧಿ ಪ್ರಸ್ತಾಪ ಇಲ್ಲ:

ಸೆ.22 ರಂದು ಚಾಮುಂಡಿಬೆಟ್ಟದಲ್ಲಿ ಅಗ್ರಪೂಜೆಯೊಂದಿಗೆ ದಸರಾ ಉದ್ಘಾಟನೆ; ಅ.2ಕ್ಕೆ ಜಂಬೂ ಸವಾರಿ

ಬೆಂಗಳೂರು – ಈ ಬಾರಿಯ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ, ಹಾಸನ ಮೂಲದ ಬಾನು ಮುಷ್ತಾಕ್ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರ ‘ಎದೆಯ ಹಣತೆ’ (ಹಾರ್ಟ್ ಲ್ಯಾಂಪ್) ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಕನ್ನಡಿಗರೊಬ್ಬರಿಗೆ ಈ ಪ್ರಶಸ್ತಿ ಬಂದಿರು ವುದು ಸಂತಸದ ಸಂಗತಿ ಯಾಗಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಅವರೊಂದಿಗೆ ಈ ಕುರಿತು ಚರ್ಚಿಸಿದ್ದು, ಅವರಿಗೆ ಸಂಪ್ರದಾಯದಂತೆ ಜಿಲ್ಲಾಡಳಿತ ಆಹ್ವಾನ ನೀಡಲಿದೆ ಎಂದರು.
ಕರ್ನಾಟಕದ ಮಹಿಳೆಯೊಬ್ಬರಿಗೆ ಬೂಕರ್ ಪ್ರಶಸ್ತಿ ದೊರೆತಿರುವುದು ಹೆಮ್ಮೆ ವಿಷಯ. ಬಾನು ಮುಸ್ತಾಕ್ ರೈತ ಸಂಘ, ಕನ್ನಡ ಪರ ಚಳವಳಿಗಳಲ್ಲಿ ಭಾಗವಹಿಸಿದ್ದು, ಪ್ರಗತಿ ಪರ ಚಿಂತನೆ ಉಳ್ಳವರು. ಇಂತಹ ಮಹಿಳೆಯಿಂದ ನಾವು ಈ ಬಾರಿಯ ದಸರಾ ಉದ್ಘಾಟನೆ ಮಾಡಿಸುತ್ತಿದ್ದೇವೆ.

ಸೆಪ್ಟೆಂಬರ್ 22 ರಂದು ಚಾಮುಂಡಿ ಬೆಟ್ಟದಲ್ಲಿ ಅಗ್ರ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿ ದಸರಾ ಮಹೋತ್ಸವ 10 ದಿನಗಳಿಗೆ ಬದಲಾಗಿ ಪಂಚಾಂಗ ಪ್ರಕಾರ 11 ದಿನ ಜರುಗಲಿದೆ, ಅಕ್ಟೋಬರ್ 2ರಂದು ವಿಜಯ ದಶಮಿ ಆಚರಣೆ ಮೂಲಕ ದಸರಾ ಮಹೋತ್ಸವ ಮುಕ್ತಾಯಗೊಳ್ಳಲಿದೆ.

ಸೋನಿಯಾ ಗಾಂಧಿ ಪ್ರಸ್ತಾಪ ಇಲ್ಲ:
ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಕಾರ್ಯಾಲಯ ಪತ್ರಿಕಾ ಹೇಳಿಕೆ ನೀಡಿ, ಸೋನಿಯಾ ಗಾಂಧಿ ಅವರಿಂದ ದಸರಾ ಉದ್ಘಾಟನೆಗೆ ಮನವಿ ಮಾಡಲಾಗಿದೆ ಎಂಬುದು ಸರಿಯಲ್ಲ. ಕೆಲವು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು, ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲೀ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸುತ್ತಿರುವ ಕರುನಾಡಿನ ಹಿರಿಯ ಲೇಖಕಿ ಎಸ್.ಕೆ.ಬಾನು ಮುಷ್ತಾಕ್ ಸಣ್ಣ ಕಥಾ ಸಂಕಲನ “ಹಾರ್ಟ್ ಲ್ಯಾಂಪ್” (ಎದೆಯ ಹಣತೆ) ಕೃತಿಗೆ 2025ನೇ ಸಾಲಿನ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೀಪಾ ಭಕ್ತಿ ಅವರು ಎದೆಯ ಹಣತೆ ಕನ್ನಡ ಪುಸ್ತಕವನ್ನು ಇಂಗ್ಲಿಷ್‌ ಗೆ ಅನುವಾದಿಸಿ ಅದಕ್ಕೆ ‘ಹಾರ್ಟ್ ಲ್ಯಾಂಪ್’ ಹೆಸರಿಟ್ಟಿದ್ದರು. ಇತ್ತೀಚಿಗೆ ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೂಲತಃ ಹಾಸನದವರಾದ ಬಾನು ಮುಷ್ಕಾಕ್ ಅವರು 1948, ಏಪ್ರಿಲ್ 3 ರಂದು ಮುಸ್ಲಿಂ ಸಮುದಾಯದಲ್ಲಿ ಜನಿಸಿದರು. 8 ವರ್ಷವಿದ್ದಾಗ ಶಿವಮೊಗ್ಗದ ಕನ್ನಡ ಭಾಷೆಯ ಮಿಷನರಿ ಶಾಲೆಗೆ ದಾಖಲಾದರು. ಮಾತೃ ಭಾಷೆ ಉರ್ದುವಾದರೂ ಬಾನು ಮುಷ್ಕಾಕ್ ಅವರಿಗೆ ಕನ್ನಡ ಭಾಷೆಯ ಮೇಲೆ ಹಿಡಿತವಿದೆ. ಈ ಹಿನ್ನೆಲೆ ಬಹಳಷ್ಟು ಲೇಖನಗಳನ್ನು ಬರೆದಿದ್ದು, ಹಿಂದಿ, ಉರ್ದು, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗೆ ಅನುವಾದವಾಗಿದೆ.

ಬಾನು ಮುಷ್ತಾಕ್ ಅವರು ಮೂಲಭೂತವಾದ ಹಾಗೂ ಸಾಮಾಜಿಕ ಅನ್ಯಾಯದ ವಿರುದ್ಧ 1980 ರಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ. ಮುಸ್ಲಿಂ ಮಹಿಳೆಯರ ಮಸೀದಿಗಳ ಪ್ರವೇಶ ಹಕ್ಕಿನ ಪ್ರತಿಪಾದನೆಗಾಗಿ 2000ನೇ ಇಸವಿಯಲ್ಲಿ ಬಾನು ಮುಸ್ತಾಕ್ ಅವರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಯಿತು. ಪ್ರಾಣ ಬೆದರಿಕೆಗಳು ಬಂದವು. ಆದರೆ ಬಾನು ಮುಷ್ಕಾಕ್ ಇದಕ್ಕೆಲ್ಲಾ ಹೆದರದೆ, ಮೂಲಭೂತವಾದದ ವಿರುದ್ಧ ಈ ತನಕ ಹೋರಾಟ ನಡೆಸುತ್ತಾ ಬಂದಿದ್ದಾರೆ. ಸಾಹಿತಿ, ಹೋರಾಟ ಗಾರ್ತಿಯೂ ಆಗಿರುವ ಬಾನು ಮುಷ್ಕಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡಲಿದ್ದು, ಆ ವೇಳೆ ಅವರ ಸಂದೇಶ ಬಹಳ ನಿರೀಕ್ಷೆ ಮೂಡಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!