ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು ನೋಡಿದರೆ ಜನ ನೀವು ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಿದ್ದೀರಿ ಎಂದು ಭಾವಿಸುತ್ತಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಂದುವರಿದು, “ನಿಜವಾದ ಭಯೋತ್ಪಾದಕರನ್ನು ನಿಮ್ಮ ಪಕ್ಷದ ನಾಯಕರು ‘ಬ್ರದರ್ಸ್’ ಎಂದು ಸಂಬೋಧಿಸುತ್ತಾರೆ, ಆದರೆ ದೇಶದ ಪ್ರಧಾನಿಯನ್ನು ಟೀಕಿಸುವಾಗ ಇಂತಹ ಕೆಳಮಟ್ಟದ ಭಾಷೆ ಬಳಸುತ್ತಿರುವುದು ಖಂಡನೀಯ,” ಎಂದು ಕಿಡಿಕಾರಿದರು.




