ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ; 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್ ಗಳು ಹೀಗಿದೆ.

ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಮಾಹಿತಿಯನ್ನು ನೀಡಿದರು.

*ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

*3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.

*PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ

*1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.

*ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.

*ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ.

*ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.

*ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.

*ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.

*ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ

*40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.

*ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.

*ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.

*ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.

*ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ

*ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.

*ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ


ಇವು ಪ್ರಮುಖ ಎಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳು

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!