ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ರೇಡ್

ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕ್ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ರೇಡ್ ಮಾಡಲಾಗಿದೆ.
ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ರೇಡ್ ಮಾಡಿದ್ದಾರೆ. ಮನೆಯಲ್ಲಿ ಇಡೀ ದಿನ ಸಿಬಿಐ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಅನಿಲ್ ಅಂಬಾನಿ ಮಾಲೀಕತ್ವದ ಕಂಪನಿಗಳ ಮೇಲೂ ದಾಳಿ ಮಾಡಿದ್ದಾರೆ. ಬ್ಯಾಂಕ್ ಗಳಿಗೆ ಬರೋಬ್ಬರಿ 2 ಸಾವಿರ ಕೋಟಿ ರೂಪಾಯಿಯನ್ನು ವಂಚಿಸಿದ ಆರೋಪ ಅನಿಲ್ ಅಂಬಾನಿ ಹಾಗೂ ಅವರ ಕಂಪನಿಗಳ ಮೇಲಿದೆ. ಮುಂಬೈನ ಕೂಫೆ ಪರೇಡ್ ಸೀ ವಿಂಡ್ ಕಾಂಪ್ಲೆಕ್ಸ್ ನಲ್ಲಿರುವ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಸಿಬಿಐ ದಾಳಿ ವೇಳೆ, ಅನಿಲ್ ಅಂಬಾನಿ ಮನೆಯಲ್ಲೇ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಪಾರ್ಲಿಮೆಂಟ್ ನಲ್ಲಿ ಸ್ಟೇಟ್ ಆಫ್ ಇಂಡಿಯಾ , ಅನಿಲ್ ಅಂಬಾನಿ ಹಾಗೂ ಅವರ ಮಾಲೀಕತ್ವದ ರಿಲಯನ್ಸ್ ಕಮ್ಯೂನಿಕೇಷನ್ಸ್ ಲಿಮಿಟೆಡ್ ಕಂಪನಿಯನ್ನು ಫ್ರಾಡ್ ಎಂದು ವರ್ಗೀಕರಣ ಮಾಡಿರುವುದಾಗಿ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಉತ್ತರ ನೀಡಿದ್ದಾರೆ.

20225ರ ಜೂನ್ 13 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಸ್ಟರ್ ಡೈರೆಕ್ಷನ್ ಆನ್ ಫ್ರಾಡ್ ರಿಸ್ಕ್ ಮ್ಯಾನೇಜ್ ಮೆಂಟ್ ಮತ್ತು ಎಸ್‌ಬಿಐನ ಅಂತರಿಕ ನೀತಿಯಡಿ ಈ ವರ್ಗೀಕರಣ ಮಾಡಲಾಗಿದೆ ಎಂದು ಪಂಕಜ್ ಚೌಧರಿ ಹೇಳಿದ್ದಾರೆ.ಇನ್ನೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಕಮ್ಯೂನಿಕೇಷನ್ಸ್ ಗೆ ಒಟ್ಟಾರೆ 2,227 ಕೋಟಿ ರೂಪಾಯಿ ಹಣವನ್ನು ಸಾಲವಾಗಿ ನೀಡಿದೆ. ಇನ್ನೂ ನಾನ್ ಫಂಡ್ ಬ್ಯಾಂಕ್ ಗ್ಯಾರಂಟಿಯಾಗಿ 786 ಕೋಟಿ ರೂಪಾಯಿ ನೀಡಿದೆ. ಇನ್ನೂ ಇ.ಡಿ. ಕೂಡ ಅನಿಲ್ ಅಂಬಾನಿ ವಿರುದ್ಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಕೂಡ ಅನಿಲ್ ಅಂಬಾನಿ ಮೇಲಿದೆ. ಜೊತೆಗೆ ಬ್ಯಾಂಕ್ ನಿಂದ ಸಾಲ ಪಡೆಯಲು ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪವೂ ಅನಿಲ್ ಅಂಬಾನಿ ಹಾಗೂ ಅವರ ಮಾಲೀಕತ್ವದ ಕಂಪನಿಗಳ ಮೇಲಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!