CBSE 10 ನೇ ತರಗತಿ ಪರೀಕ್ಷೆಗಳು 2026 ರಿಂದ ವರ್ಷಕ್ಕೆ ಎರಡು ಬಾರಿ ನಡೆಯಲಿವೆ….

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 2026ರಿಂದ 10ನೇ ತರಗತಿಯ ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲು ನಿರ್ಧರಿಸಿದೆ. ವಿದ್ಯಾರ್ಥಿಗಳು ಮೊದಲ ಹಂತಕ್ಕೆ ಹಾಜರಾಗುವುದು ಕಡ್ಡಾಯವಾಗಿದೆ. ಎರಡನೇ ಹಂತವು ಐಚ್ಛಿಕವಾಗಿದೆ. ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಮತ್ತು ಭಾಷೆಯ ಯಾವುದೇ ಮೂರು ವಿಷಯಗಳಲ್ಲಿ ತಮ್ಮ ಅಂಕಗಳನ್ನು ಸುಧಾರಿಸಲು ವಿದ್ಯಾರ್ಥಿಗಳಿಗೆ ಎರಡನೇ ಹಂತಕ್ಕೆ ಹಾಜರಾಗಲು ಅವಕಾಶ ನೀಡಲಾಗುವುದು. ಈ ನಿಟ್ಟಿನಲ್ಲಿ, ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ಬರೆಯಲು ಅನುವು ಮಾಡಿಕೊಡುವ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹೊಸ ನೀತಿಯ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳು 10 ನೇ ತರಗತಿಯ ಮೊದಲ ಹಂತದ ಪರೀಕ್ಷೆಗಳನ್ನು ಬರೆಯಬೇಕಾಗುತ್ತದೆ.

ಮೊದಲ ಹಂತದ ಪರೀಕ್ಷೆಗಳು ಫೆಬ್ರವರಿ ತಿಂಗಳಲ್ಲಿ ನಡೆಯಲಿವೆ. 10 ನೇ ತರಗತಿಯ ಎರಡನೇ ಹಂತದ ಪರೀಕ್ಷೆಗಳನ್ನು ಐಚ್ಛಿಕಗೊಳಿಸಲಾಗಿದೆ. ಎರಡನೇ ಹಂತದ ಪರೀಕ್ಷೆಗಳು ಮೇ ತಿಂಗಳಲ್ಲಿ ನಡೆಯಲಿವೆ. ಮೇ ತಿಂಗಳಲ್ಲಿ ನಡೆಯುವ ಪರೀಕ್ಷೆಗಳು ಐಚ್ಛಿಕವಾಗಿರುತ್ತವೆ. ಅಂದರೆ ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ಬರೆಯಬಹುದು. ಎರಡೂ ಹಂತಗಳಲ್ಲಿ ಉತ್ತಮ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಮಂಡಳಿ ಹೇಳಿದೆ. ಈ ನೀತಿಯು ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿದೆ ಎಂದು ಮಂಡಳಿ ಹೇಳಿದೆ, ಇದು ವಿದ್ಯಾರ್ಥಿಗಳಿಗೆ ಅದೇ ಶೈಕ್ಷಣಿಕ ವರ್ಷದಲ್ಲಿ ಎರಡನೇ ಪ್ರಯತ್ನವನ್ನು ನೀಡುವ ಮೂಲಕ ಅವರ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಲು ಅವಕಾಶವನ್ನು ಒದಗಿಸುತ್ತದೆ.

 

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್