ಮೈಸೂರು ಮೂಲದ ಪಾಕಿಸ್ತಾನದ ಮಹಿಳೆ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾ.

ಮೈಸೂರು : ಪಾಕಿಸ್ತಾನದ ವ್ಯಕ್ತಿಯನ್ನು ಮದುವೆಯಾಗಿರುವ ಮೈಸೂರು ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಪಾಕಿಸ್ತಾನಕ್ಕೆ ವಾಪಸಾಗಲು ಬಲವಂತದ ಕ್ರಮ ಕೈಗೊಳ್ಳದೆ, ಭಾರತದಲ್ಲೇ ವಾಸ್ತವ್ವ ಮುಂದುವರೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ. ಉಮಾ ನೇತೃತ್ವದ ರಜಾ ಕಾಲದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಕಾರಣವನ್ನು ಸ್ಪಷ್ಟಪಡಿಸಿದೆ ಮೈಸೂರಿನ ರಾಜೀವ್ ನಗರದ ರಂಷಾ ಜಹಾನ್, ಪಾಕಿಸ್ತಾನದ ಬಲೂಚಿಸ್ತಾನ ಮೂಲದ ಮೊಹ ಮೃದ್ ಫಾರೂಕ್ ಎಂಬಾತ ನನ್ನು ಕಳೆದ 10 ವರ್ಷದ ಹಿಂದೆ ಮದುವೆಯಾಗಿದ್ದರು. ರಂಷಾ ದಂಪತಿಗೆ ಕುಮಾರಿ ಬಿಬಿ ಯಾಮಿನಾ (8), ರಂಷಾ ಮೊಹಮ್ಮದ್ ಮುದಾಸೀರ್ (4) ಹಾಗೂ ಮೊಹಮ್ಮದ್ ಯೂಸುಫ್ (3) ಮಕ್ಕಳಿದ್ದಾರೆ. ಮೂವರು ಮಕ್ಕಳಿಗೆ ಪಾಕಿಸ್ತಾನದ ಪೌರತ್ವ ನೀಡಿದ್ದ ಅಲ್ಲಿನ ಸರ್ಕಾರ ರಂಷಾ ಜಹಾನ್ಗೆ ಪೌರತ್ವ ನೀಡಲು ನಿರಾಕರಿಸಿತ್ತು.

ಆದರೆ, ಪತಿ ಜೊತೆಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಂಷಾ ಮೂಮು ಮಕ್ಕಳೊಂದಿಗೆ ಜನಮ 24, 2025 ರಂದು ಭಾರತಕ್ಕೆ ಹಿಂತಿರುಗಿ ತವರು ಮನೆ ಸೇರಿದ್ದರು.
ಆದರೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಭಯೋ ಜಹಾನ್ ತ್ಪಾದಕರು 26 ಪ್ರವಾಸಿಗರ ಮಾರಣ ಹೋಮ ನಡೆಸಿದ ನಂತರ ಭಾರತ ದಲ್ಲಿರುವ ಎಲ್ಲಾ ಪಾಕಿಸ್ತಾನದ ಪ್ರಜೆಗಳು ತಮ್ಮ ದೇಶಕ್ಕೆ ವಾಪಾಸಾಗಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ವಿಧಿಸಿತ್ತು.

ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹೋಗದಂತೆ ತಮ್ಮ ವಿರುದ್ಧ ಬಲ ವಂತದ ಕ್ರಮ ಕೈಗೊಳ್ಳದೆ ಭಾರತದಲ್ಲೇ ವಾಸ್ತವ್ಯ ಮುಂದುವರೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಂಷಾ ಜಹಾನ್ ಮತ್ತು ಮಕ್ಕಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಕೇಂದ್ರ ಸರ್ಕಾರದ ಪರ ವಕೀಲ ಡಿಎಸ್ ಜಿ ಶಾಂತಿ ಭೂಷಣ್, ರಂಷಾ ಅವರ ಅರ್ಜಿಗೆ ಮಾನ್ಯತೆ ನೀಡದಂತೆ ಮತ್ತು ಕೇಂದ್ರ ಸರ್ಕಾರದ ತೀರ್ಮಾನದ ಮಹತ್ವವನ್ನು ವಿವರಿಸಿದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎಂ.ಜಿ.ಉಮಾ, ರಂಷಾ ಮತ್ತು ಮೂವರು ಮಕ್ಕಳ ಅರ್ಜಿಯನ್ನು ವಜಾ ಗೊಳಿಸಿದರು. ಪಾಕಿಸ್ತಾನದ ಪ್ರಜೆಗಳ ವೀಸಾ ರದ್ದತಿ ಮಾಡಿ ಅವರ ದೇಶಕ್ಕೆ ಹೋಗುವಂತೆ ಏಪ್ರಿಲ್ 25 ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಭಾರತ ಒಕ್ಕೂಟವು ಭದ್ರತೆಯ ಕುರಿತಾದ ಸಂಪುಟ ಸಮಿತಿಯ ಮೂಲಕ ಭಾರತದ ಪ್ರಜೆಗಳ ಹಿತಾಸಕ್ತಿ ಕಾಪಾಡಲು ಪ್ರಜ್ಞಾಪೂರ್ವಕ ವಾದ ದಿಟ್ಟ ಕ್ರಮ ಕೈಗೊಂಡಿದೆ. ಈ ವಿಚಾರ ದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಲ್ಲದೆ ಪಾಕಿಸ್ತಾನಕ್ಕೆ ಹೋಗದೆ ಭಾರತ ದಲ್ಲೇ ಇರಲು ನಿಮ್ಮ ಪರವಾಗಿ ಅನುಕೂಲ ಕರವಾದ ಆದೇಶ ನೀಡಲು ಯಾವುದೇ ಕಾರಣ ಸಿಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿ, ರಂಷಾ ಮತ್ತು ಮಕ್ಕಳ ಅರ್ಜಿಯನ್ನು ನ್ಯಾಯ ಮೂರ್ತಿ ಉಮಾ ವಜಾ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!