ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ: ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ.

ಬೆಂಗಳೂರು: ಮೈಸೂರು ದಸರಾ ಉತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಸ್ತಾಕ್ ಅವರನ್ನು ಆಹ್ವಾನ ನೀಡಿರುವ ವಿಚಾರವನ್ನು ಪ್ರತಿಸ್ಪಂದಿಸಿದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ” ಎಂಬ ಹೇಳಿಕೆಯಿಂದ ವಿವಾದ ಕೆರಳಿಸಿದ್ದಾರೆ.

“ಅದು ಅವರ (ಬಾನು ಮುಸ್ತಾಕ್) ನಂಬಿಕೆ. ನಾವು ಮಸೀದಿ, ಜೈನ್ ದೇವಸ್ಥಾನ, ಗುರುದ್ವಾರಗಳಿಗೆ ಹೋಗುತ್ತೇವೆ. ಹಾಗೆಂದು ಯಾರಾದರೂ ನಮ್ಮನ್ನು ತಡೆಯುತ್ತಾರಾ? ಮುಸ್ಲಿಮರು ಹಿಂದೂಗಳಾಗಲ್ವಾ? ಹಿಂದೂಗಳು ಮುಸ್ಲಿಂ ಆಗಲ್ವಾ?” ಎಂದು ಅವರು ಪ್ರಶ್ನಿಸಿದರು.

“ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಯಾರಿಗೂ ತಡೆ ಇಲ್ಲ. ಹಿಂದೂ ದೇವಾಲಯಗಳಿಗೆ ಹಲವಾರು ಧರ್ಮಗಳವರು ಭೇಟಿ ಕೊಡುತ್ತಾರೆ. ಇದು ಸಂವಿಧಾನಪಾಲನೆಯ ರಾಷ್ಟ್ರ. ಮದುವೆಯಾದ ದಂಪತಿಗಳಲ್ಲಿ ಧರ್ಮ ಕಲ್ಪನೆ ಬೇರೆ ಬೇರೆ ಆಗಬಹುದು, ಆದರೆ ಮಕ್ಕಳಿಗೆ ಆಯ್ಕೆಯಿರಬೇಕು,” ಎಂದು ಅವರು ತಿಳಿಸಿದರು.

“ಬಾನು ಮುಸ್ತಾಕ್ ಕನ್ನಡದಲ್ಲಿ ಬರೆದಿದ್ದಾರೆ. ಯಾರು ಯಾವ ಧರ್ಮದವರು ಎಂದು ನಾವು ಪ್ರಶ್ನೆ ಮಾಡುವಲ್ಲ. ನಾವು ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ; ನಾವು ಜಾತ್ಯಾತೀತ ತತ್ವಗಳಲ್ಲಿ ನಂಬಿಕೆ ಇಡುವವರು,” ಎಂದು ಡಿಕೆಶಿ ಹೇಳಿದ್ದಾರೆ.

ಡಿಕೆಶಿಯ ಹೇಳಿಕೆಗೆ ಯದುವೀರ್ ಕಿರಿಆಲಿಸಿ

ಮೈಸೂರು: “ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ” ಎಂಬ ಡಿಕೆಶಿಯ ಹೇಳಿಕೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ ಅವರು, “ಗೌರಿ ಹಬ್ಬದ ಪವಿತ್ರ ದಿನವೇ ಇಂತಹ ಹೇಳಿಕೆ ನೀಡಿ ಅವರು ಹಿಂದೂ ಸಂಪ್ರದಾಯ ಮತ್ತು ನಂಬಿಕೆಗಳಿಗೆ ಧಕ್ಕೆಯಾಗುವ ಕೆಲಸ ಮಾಡಿದ್ದಾರೆ. ಚಾಮುಂಡಿಬೆಟ್ಟವು ಶಕ್ತಿ ಪೀಠವಾಗಿದ್ದು ಶಾಸ್ತ್ರಸಮ್ಮತವಾಗಿದೆ. ಕೋಟ್ಯಂತರ ಹಿಂದೂಗಳು ಪೂಜಿಸುವ ಈ ಸ್ಥಳ ಯಾವಾಗಲೂ ಹಿಂದೂಗಳ ಆಸ್ತಿಯಾಗಿಯೇ ಇರುತ್ತದೆ,” ಎಂದು ಹೇಳಿದ್ದಾರೆ.

“ಕರ್ನಾಟಕದ ಜನರು ಎಲ್ಲಾ ಧರ್ಮಗಳಿಗೆ ಗೌರವವಿಡುತ್ತಾರೆ. ಆದರೆ ಹಿಂದೂ ದೇವಾಲಯಗಳು, ಹಬ್ಬಗಳು ಮತ್ತು ಸಂಪ್ರದಾಯಗಳ ಮೇಲಿನ ನಿರಂತರ ದಾಳಿಯನ್ನು ಎಂದಿಗೂ ಸಹಿಸಲಾರರು,” ಎಂದು ಯದುವೀರ್ ಎಚ್ಚರಿಸಿದ್ದಾರೆ.

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!