ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು.

ಪ್ರತಿಯೊಂದು ಮಳಿಗೆಗಳು, ಬ್ರ್ಯಾಂಡ್‌ಗಳು ತಮ್ಮ ಉತ್ಪನ್ನಗಳನ್ನು ಪ್ರಚಾರ ಮಾಡಲು ವಿಶಿಷ್ಟ ರೀತಿಯ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತವೆ. ಆದರೆ ಬೆಂಗಳೂರಿನ ನಾವೀನ್ಯತೆಯನ್ನು ಪ್ರದರ್ಶಿಸುವ ಈ ಸೀರೆ ಅಂಗಡಿಯೂ ಗ್ರಾಹಕರನ್ನು ಸೆಳೆಯಲು ತಂತ್ರಜ್ಞಾನವನ್ನು ಬಳಸಿಕೊಂಡು ವಿಶಿಷ್ಟವಾಗಿ ಜಾಹೀರಾತು ನೀಡಿದೆ. ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸ ಹೊಂದಿರುವ ಜಾಹೀರಾತನ್ನು ಬಳಸಿಕೊಂಡು ಗ್ರಾಹಕರ ಗಮನ ಸೆಳೆದಿದೆ. ಇದೀಗ ಕೃತಕ ಬುದ್ಧಿ ಮತ್ತೆ ಆಧಾರಿತ ಡಿಸ್ಪ್ಲೇ ಜಾಹೀರಾತು ತಂತ್ರಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಬೆಂಗಳೂರು ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಬ್ರ್ಯಾಂಡ್‌ ಮಾರುಕಟ್ಟೆಯಲ್ಲಿ ಜನರಿಗೆ ಹತ್ತಿರವಾಗಬೇಕೆಂದು ನಾನಾ ರೀತಿಯ ಕಸರತ್ತು ಮಾಡುತ್ತವೆ. ಬಗೆ ಬಗೆಯ ಕ್ರಿಯೇಟಿವ್‌ ಮಾರುಕಟ್ಟೆ ತಂತ್ರಗಳನ್ನು ಅನುಸರಿಸುತ್ತದೆ. ಗ್ರಾಹಕರನ್ನು ಆಕರ್ಷಿಸಲು ವಿಭಿನ್ನ ರೀತಿಯ ಜಾಹೀರಾತನ್ನು ನೀಡುತ್ತವೆ. ಆದರೆ ಇಂದಿನ ತಂತ್ರಜ್ಞಾನದ ಯುಗದಲ್ಲಿ ಬೆಂಗಳೂರಿನ ಸೀರೆ ಅಂಗಡಿಯೊಂದು ಚಾಟ್ ಜಿಪಿಟಿಯನ್ನೇ (Chat GPT) ಜಾಹೀರಾತಿನ ಭಾಗವಾಗಿ ಬಳಸಿಕೊಂಡಿವೆ. ಅದೇಗೆ ಅಂತೀರಾ?. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿರುವ ವಿಶಿಷ್ಟ ಜಾಹೀರಾತಿನ ಮೂಲಕ ಗ್ರಾಹಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಈ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

https://youtu.be/JXlm7kaxoDo?si=4nrAgDYfXpkNXwNZಧರ್ಮಸ್ಥಳದಲ್ಲಿ ಸಮಾಧಿ ಅಗೆಯೋ 2ನೇ ದಿನದ ಕಾರ್ಯಾಚರಣೆ ಆರಂಭ… ಧರ್ಮಸ್ಥಳ ಕಾಡಿನಲ್ಲಿ ಶ*ವಗಳ ಹುಡುಕಾಟ!

@os7borne ಹೆಸರಿನ ಎಕ್ಸ್ ಖಾತೆಯಲ್ಲಿ ಜಾಹೀರಾತಿನ ಈ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ChatGPT ಪರದೆಯಲ್ಲಿ “ವರಮಹಾಲಕ್ಷ್ಮಿ ಹಬ್ಬವನ್ನು ಏಕೆ ಆಚರಿಸಲಾಗುತ್ತದೆ?” ಎಂದು ಹೇಳುವ ChatGPT ಮೊಬೈಲ್ ಇಂಟರ್ಫೇಸ್ ಬಳಸಿರುವುದನ್ನು ನೀವಿಲ್ಲಿ ನೋಡಬಹುದು. ತಂತ್ರಜ್ಞಾನವನ್ನೇ ಬಳಸಿಕೊಂಡು ಗ್ರಾಹಕರ ಗಮನ ಸೆಳೆಯುವ ಪ್ರಯತ್ನವಿದು ಎನ್ನುವುದು ಇಲ್ಲಿ ಸ್ಪಷ್ಟವಾಗಿದೆ.
ಈ ಫೋಟೋ ಹಂಚಿಕೊಂಡ ಬಳಕೆದಾರ ಬೆಂಗಳೂರಿನ ಸ್ಥಳೀಯ ಸೀರೆ ಅಂಗಡಿಯಲ್ಲಿ ಜಾಹೀರಾತಿಗಾಗಿ ChatGPT ಮೊಬೈಲ್ ಇಂಟರ್ಫೇಸ್ ಬಳಸುವುದು ಇದೇ ಮೊದಲು. ಇದಕ್ಕೂ ಮೊದಲು, ಇದು Google ಹುಡುಕಾಟ ಪಟ್ಟಿಯ ವಿನ್ಯಾಸವಾಗಿತ್ತು. ಇಂತಹದ್ದೆಲ್ಲವನ್ನು ಬೆಂಗಳೂರಿನಲ್ಲಿ ಮಾತ್ರ ಸಾಧ್ಯ ಎಂದು ನಾನು ಭಾವಿಸುತ್ತೇನೆ” ಎಂದು ಹೀಗೆ ಬರೆದುಕೊಂಡಿದ್ದಾರೆ.

ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರೊಬ್ಬರು, ಅದ್ಭುತ, ಇಂತಹ ಬದಲಾವಣೆಯೂ ಬೆಂಗಳೂರಿನಲ್ಲಿ ಆರಂಭವಾಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಸ್ಥಳೀಯರು ಸೀರೆ ಅಂಗಡಿಗೆ ನಿಯಮಿತವಾಗಿ ಭೇಟಿ ನೀಡುವುದನ್ನು ಪ್ರೋತ್ಸಾಹಿಸುವುದೇ ಇದರ ಮೂಲ ಉದ್ದೇಶ ಎಂದು ಕಾಮೆಂಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ ಸೀರೆ ಅಂಗಡಿ ಹಾಗೂ ಆಟೋ ಚಾಲಕ ಈ ರೀತಿ ತಂತ್ರಜ್ಞಾನ ಬಳಸಿ ವೈರಲ್ ಆಗಬಹುದು ಎಂದು ಹೇಳಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!