ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು.

ಪ್ರತಿಯೊಂದು ಮಳಿಗೆಗಳು, ಬ್ರ್ಯಾಂಡ್‌ಗಳು ತಮ್ಮ ಉತ್ಪನ್ನಗಳನ್ನು ಪ್ರಚಾರ ಮಾಡಲು ವಿಶಿಷ್ಟ ರೀತಿಯ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತವೆ. ಆದರೆ ಬೆಂಗಳೂರಿನ ನಾವೀನ್ಯತೆಯನ್ನು ಪ್ರದರ್ಶಿಸುವ ಈ ಸೀರೆ ಅಂಗಡಿಯೂ ಗ್ರಾಹಕರನ್ನು ಸೆಳೆಯಲು ತಂತ್ರಜ್ಞಾನವನ್ನು ಬಳಸಿಕೊಂಡು ವಿಶಿಷ್ಟವಾಗಿ ಜಾಹೀರಾತು ನೀಡಿದೆ. ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸ ಹೊಂದಿರುವ ಜಾಹೀರಾತನ್ನು ಬಳಸಿಕೊಂಡು ಗ್ರಾಹಕರ ಗಮನ ಸೆಳೆದಿದೆ. ಇದೀಗ ಕೃತಕ ಬುದ್ಧಿ ಮತ್ತೆ ಆಧಾರಿತ ಡಿಸ್ಪ್ಲೇ ಜಾಹೀರಾತು ತಂತ್ರಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಬೆಂಗಳೂರು ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಬ್ರ್ಯಾಂಡ್‌ ಮಾರುಕಟ್ಟೆಯಲ್ಲಿ ಜನರಿಗೆ ಹತ್ತಿರವಾಗಬೇಕೆಂದು ನಾನಾ ರೀತಿಯ ಕಸರತ್ತು ಮಾಡುತ್ತವೆ. ಬಗೆ ಬಗೆಯ ಕ್ರಿಯೇಟಿವ್‌ ಮಾರುಕಟ್ಟೆ ತಂತ್ರಗಳನ್ನು ಅನುಸರಿಸುತ್ತದೆ. ಗ್ರಾಹಕರನ್ನು ಆಕರ್ಷಿಸಲು ವಿಭಿನ್ನ ರೀತಿಯ ಜಾಹೀರಾತನ್ನು ನೀಡುತ್ತವೆ. ಆದರೆ ಇಂದಿನ ತಂತ್ರಜ್ಞಾನದ ಯುಗದಲ್ಲಿ ಬೆಂಗಳೂರಿನ ಸೀರೆ ಅಂಗಡಿಯೊಂದು ಚಾಟ್ ಜಿಪಿಟಿಯನ್ನೇ (Chat GPT) ಜಾಹೀರಾತಿನ ಭಾಗವಾಗಿ ಬಳಸಿಕೊಂಡಿವೆ. ಅದೇಗೆ ಅಂತೀರಾ?. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿರುವ ವಿಶಿಷ್ಟ ಜಾಹೀರಾತಿನ ಮೂಲಕ ಗ್ರಾಹಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಈ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

https://youtu.be/JXlm7kaxoDo?si=4nrAgDYfXpkNXwNZಧರ್ಮಸ್ಥಳದಲ್ಲಿ ಸಮಾಧಿ ಅಗೆಯೋ 2ನೇ ದಿನದ ಕಾರ್ಯಾಚರಣೆ ಆರಂಭ… ಧರ್ಮಸ್ಥಳ ಕಾಡಿನಲ್ಲಿ ಶ*ವಗಳ ಹುಡುಕಾಟ!

@os7borne ಹೆಸರಿನ ಎಕ್ಸ್ ಖಾತೆಯಲ್ಲಿ ಜಾಹೀರಾತಿನ ಈ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ChatGPT ಪರದೆಯಲ್ಲಿ “ವರಮಹಾಲಕ್ಷ್ಮಿ ಹಬ್ಬವನ್ನು ಏಕೆ ಆಚರಿಸಲಾಗುತ್ತದೆ?” ಎಂದು ಹೇಳುವ ChatGPT ಮೊಬೈಲ್ ಇಂಟರ್ಫೇಸ್ ಬಳಸಿರುವುದನ್ನು ನೀವಿಲ್ಲಿ ನೋಡಬಹುದು. ತಂತ್ರಜ್ಞಾನವನ್ನೇ ಬಳಸಿಕೊಂಡು ಗ್ರಾಹಕರ ಗಮನ ಸೆಳೆಯುವ ಪ್ರಯತ್ನವಿದು ಎನ್ನುವುದು ಇಲ್ಲಿ ಸ್ಪಷ್ಟವಾಗಿದೆ.
ಈ ಫೋಟೋ ಹಂಚಿಕೊಂಡ ಬಳಕೆದಾರ ಬೆಂಗಳೂರಿನ ಸ್ಥಳೀಯ ಸೀರೆ ಅಂಗಡಿಯಲ್ಲಿ ಜಾಹೀರಾತಿಗಾಗಿ ChatGPT ಮೊಬೈಲ್ ಇಂಟರ್ಫೇಸ್ ಬಳಸುವುದು ಇದೇ ಮೊದಲು. ಇದಕ್ಕೂ ಮೊದಲು, ಇದು Google ಹುಡುಕಾಟ ಪಟ್ಟಿಯ ವಿನ್ಯಾಸವಾಗಿತ್ತು. ಇಂತಹದ್ದೆಲ್ಲವನ್ನು ಬೆಂಗಳೂರಿನಲ್ಲಿ ಮಾತ್ರ ಸಾಧ್ಯ ಎಂದು ನಾನು ಭಾವಿಸುತ್ತೇನೆ” ಎಂದು ಹೀಗೆ ಬರೆದುಕೊಂಡಿದ್ದಾರೆ.

ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರೊಬ್ಬರು, ಅದ್ಭುತ, ಇಂತಹ ಬದಲಾವಣೆಯೂ ಬೆಂಗಳೂರಿನಲ್ಲಿ ಆರಂಭವಾಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಸ್ಥಳೀಯರು ಸೀರೆ ಅಂಗಡಿಗೆ ನಿಯಮಿತವಾಗಿ ಭೇಟಿ ನೀಡುವುದನ್ನು ಪ್ರೋತ್ಸಾಹಿಸುವುದೇ ಇದರ ಮೂಲ ಉದ್ದೇಶ ಎಂದು ಕಾಮೆಂಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ ಸೀರೆ ಅಂಗಡಿ ಹಾಗೂ ಆಟೋ ಚಾಲಕ ಈ ರೀತಿ ತಂತ್ರಜ್ಞಾನ ಬಳಸಿ ವೈರಲ್ ಆಗಬಹುದು ಎಂದು ಹೇಳಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು