ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು.

ಪ್ರತಿಯೊಂದು ಮಳಿಗೆಗಳು, ಬ್ರ್ಯಾಂಡ್‌ಗಳು ತಮ್ಮ ಉತ್ಪನ್ನಗಳನ್ನು ಪ್ರಚಾರ ಮಾಡಲು ವಿಶಿಷ್ಟ ರೀತಿಯ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತವೆ. ಆದರೆ ಬೆಂಗಳೂರಿನ ನಾವೀನ್ಯತೆಯನ್ನು ಪ್ರದರ್ಶಿಸುವ ಈ ಸೀರೆ ಅಂಗಡಿಯೂ ಗ್ರಾಹಕರನ್ನು ಸೆಳೆಯಲು ತಂತ್ರಜ್ಞಾನವನ್ನು ಬಳಸಿಕೊಂಡು ವಿಶಿಷ್ಟವಾಗಿ ಜಾಹೀರಾತು ನೀಡಿದೆ. ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸ ಹೊಂದಿರುವ ಜಾಹೀರಾತನ್ನು ಬಳಸಿಕೊಂಡು ಗ್ರಾಹಕರ ಗಮನ ಸೆಳೆದಿದೆ. ಇದೀಗ ಕೃತಕ ಬುದ್ಧಿ ಮತ್ತೆ ಆಧಾರಿತ ಡಿಸ್ಪ್ಲೇ ಜಾಹೀರಾತು ತಂತ್ರಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಬೆಂಗಳೂರು ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಬ್ರ್ಯಾಂಡ್‌ ಮಾರುಕಟ್ಟೆಯಲ್ಲಿ ಜನರಿಗೆ ಹತ್ತಿರವಾಗಬೇಕೆಂದು ನಾನಾ ರೀತಿಯ ಕಸರತ್ತು ಮಾಡುತ್ತವೆ. ಬಗೆ ಬಗೆಯ ಕ್ರಿಯೇಟಿವ್‌ ಮಾರುಕಟ್ಟೆ ತಂತ್ರಗಳನ್ನು ಅನುಸರಿಸುತ್ತದೆ. ಗ್ರಾಹಕರನ್ನು ಆಕರ್ಷಿಸಲು ವಿಭಿನ್ನ ರೀತಿಯ ಜಾಹೀರಾತನ್ನು ನೀಡುತ್ತವೆ. ಆದರೆ ಇಂದಿನ ತಂತ್ರಜ್ಞಾನದ ಯುಗದಲ್ಲಿ ಬೆಂಗಳೂರಿನ ಸೀರೆ ಅಂಗಡಿಯೊಂದು ಚಾಟ್ ಜಿಪಿಟಿಯನ್ನೇ (Chat GPT) ಜಾಹೀರಾತಿನ ಭಾಗವಾಗಿ ಬಳಸಿಕೊಂಡಿವೆ. ಅದೇಗೆ ಅಂತೀರಾ?. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿರುವ ವಿಶಿಷ್ಟ ಜಾಹೀರಾತಿನ ಮೂಲಕ ಗ್ರಾಹಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಈ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

https://youtu.be/JXlm7kaxoDo?si=4nrAgDYfXpkNXwNZಧರ್ಮಸ್ಥಳದಲ್ಲಿ ಸಮಾಧಿ ಅಗೆಯೋ 2ನೇ ದಿನದ ಕಾರ್ಯಾಚರಣೆ ಆರಂಭ… ಧರ್ಮಸ್ಥಳ ಕಾಡಿನಲ್ಲಿ ಶ*ವಗಳ ಹುಡುಕಾಟ!

@os7borne ಹೆಸರಿನ ಎಕ್ಸ್ ಖಾತೆಯಲ್ಲಿ ಜಾಹೀರಾತಿನ ಈ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ChatGPT ಪರದೆಯಲ್ಲಿ “ವರಮಹಾಲಕ್ಷ್ಮಿ ಹಬ್ಬವನ್ನು ಏಕೆ ಆಚರಿಸಲಾಗುತ್ತದೆ?” ಎಂದು ಹೇಳುವ ChatGPT ಮೊಬೈಲ್ ಇಂಟರ್ಫೇಸ್ ಬಳಸಿರುವುದನ್ನು ನೀವಿಲ್ಲಿ ನೋಡಬಹುದು. ತಂತ್ರಜ್ಞಾನವನ್ನೇ ಬಳಸಿಕೊಂಡು ಗ್ರಾಹಕರ ಗಮನ ಸೆಳೆಯುವ ಪ್ರಯತ್ನವಿದು ಎನ್ನುವುದು ಇಲ್ಲಿ ಸ್ಪಷ್ಟವಾಗಿದೆ.
ಈ ಫೋಟೋ ಹಂಚಿಕೊಂಡ ಬಳಕೆದಾರ ಬೆಂಗಳೂರಿನ ಸ್ಥಳೀಯ ಸೀರೆ ಅಂಗಡಿಯಲ್ಲಿ ಜಾಹೀರಾತಿಗಾಗಿ ChatGPT ಮೊಬೈಲ್ ಇಂಟರ್ಫೇಸ್ ಬಳಸುವುದು ಇದೇ ಮೊದಲು. ಇದಕ್ಕೂ ಮೊದಲು, ಇದು Google ಹುಡುಕಾಟ ಪಟ್ಟಿಯ ವಿನ್ಯಾಸವಾಗಿತ್ತು. ಇಂತಹದ್ದೆಲ್ಲವನ್ನು ಬೆಂಗಳೂರಿನಲ್ಲಿ ಮಾತ್ರ ಸಾಧ್ಯ ಎಂದು ನಾನು ಭಾವಿಸುತ್ತೇನೆ” ಎಂದು ಹೀಗೆ ಬರೆದುಕೊಂಡಿದ್ದಾರೆ.

ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರೊಬ್ಬರು, ಅದ್ಭುತ, ಇಂತಹ ಬದಲಾವಣೆಯೂ ಬೆಂಗಳೂರಿನಲ್ಲಿ ಆರಂಭವಾಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಸ್ಥಳೀಯರು ಸೀರೆ ಅಂಗಡಿಗೆ ನಿಯಮಿತವಾಗಿ ಭೇಟಿ ನೀಡುವುದನ್ನು ಪ್ರೋತ್ಸಾಹಿಸುವುದೇ ಇದರ ಮೂಲ ಉದ್ದೇಶ ಎಂದು ಕಾಮೆಂಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ ಸೀರೆ ಅಂಗಡಿ ಹಾಗೂ ಆಟೋ ಚಾಲಕ ಈ ರೀತಿ ತಂತ್ರಜ್ಞಾನ ಬಳಸಿ ವೈರಲ್ ಆಗಬಹುದು ಎಂದು ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!