CM ಸಿದ್ದು ತವರು ಕ್ಷೇತ್ರದಲ್ಲಿ ಸಾಮಾಜಿಕ ಬಹಿಷ್ಕಾರ ಜೀವಂತ….!

ಗ್ರಾಮದ ಯಜಮಾನರ ಮಾತು ಕೇಳದಕ್ಕೆ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರವನ್ನು ನೀಡಿದ್ದಾರೆ, ದಲಿತ ಸಮುದಾಯದ ಕುಟುಂಬಸ್ಥರಿಗೆ ಬಹುಷ್ಕಾರ ನೀಡಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರ ತವರೂರು ಸಿದ್ದರಾಮಯ್ಯ ಹುಂಡಿಯ ಪಕ್ಕದ ಗ್ರಾಮ ಶ್ರೀನಿವಾಸಪುರದಲ್ಲಿ ಅಮಾನವೀಯ ಘಟನೆ ನಡೆದಿದೆ.
ಯಜಮಾನರುಗಳಾದ ಚಿಕ್ಕಂಡಯ್ಯ, ಬಸವಯ್ಯ, ಮಹದೇವು, ಮೋಟಮಹದೇವಯ್ಯ ಮತ್ತು ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಮಹದೇವು ಹಾಗೂ ಬೊಮ್ಮಾಯಿ ಅವರಿಂದ ಗ್ರಾಮದ ಸುರೇಶ್ ಎಂಬುವರ ಕುಟುಂಬಕ್ಕೆ ನಾಲ್ಕು ವರ್ಷಗಳಿಂದ ಬಹಿಷ್ಕಾರವನ್ನು ಹಾಕಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಗಲಾಟೆ ಸಂಬಂಧ ನ್ಯಾಯ ಪಂಚಾಯತಿ ಮಾಡಲಾಗಿತ್ತು.
ರಂಗನಾಥಪುರ ಗ್ರಾಮದ ಪ್ರಮೋದ್ ಹಾಗೂ ಸುರೇಶ್ ನಡುವೆ ಗಲಾಟೆ ನಡೆದಿತ್ತು. ಪ್ರಮೋದ್ ಕಡೆಯವರು ಸುರೇಶ್ ಮನೆಗೆ ನುಗ್ಗಿ ಗಲಾಟೆ ಮಾಡಿ ಮನೆ ವಸ್ತುಗಳನ್ನು ಹಾಳು ಮಾಡಿದ್ದರು. ಇದರ ಬಗ್ಗೆ ನ್ಯಾಯ ಪಂಚಾಯತಿ ಮಾಡಿ ಇಬ್ಬರಿಗೂ ದಂಡ ಹಾಕಲಾಗಿತ್ತು.
ಪ್ರಮೋದ್‌ಗೆ 25 ಸಾವಿರ ಹಾಗೂ ಸುರೇಶ್‌ಗೆ 15 ಸಾವಿರ ದಂಡ ಹಾಕಿದ್ದರು. ತಮಗೆ ಅನ್ಯಾಯ ಆಗಿರುವ ಕಾರಣಕ್ಕೆ ದಂಡ ಕಟ್ಟಲ್ಲ ಎಂದಿದ್ದ ಸುರೇಶ್,
ಪಂಚಾಯಿತಿಯಲ್ಲಿ ತಮಗೆ ಮುಜುಗರ ಆಗಿದೆ ತಮ್ಮ ಮಾತು ಕೇಳಿಲ್ಲ ಎಂದು ಸುರೇಶ್ ಮೇಲೆ ಕೋಪಗೊಂಡಿದ್ದ ಯಜಮಾನರು ಅದೇ ಕೋಪದಲ್ಲಿ ತಪ್ಪು ಕಾಣಿಕ ಕಟ್ಟುವ ವರೆಗೂ ತಮ್ಮ ಕುಲಕ್ಕೆ ಸೇರಿಸಲ್ಲ ಎಂದು ಬಹಿಷ್ಕಾರ ಮಾಡಿದ್ದಾರೆ
ಬಹಿಷ್ಕಾರ ಸಂಬಂಧ ಜಿಲ್ಲಾಧಿಕಾರಿ, ಪೊಲೀಸರು, ತಹಸೀಲ್ದಾರ್ ಗೆ ದೂರು ನೀಡಿದರು. ಸಿಎಂ ಸಿದ್ದರಾಮಯ್ಯ, ಮಗ ಯತೀಂದ್ರ ಬಳಿ ಕಷ್ಟ ಹೇಳಿಕೊಂಡರೂ ಇವರಿಗೂ ಯಾವುದೇ ಪರಿಹಾರ ದೊರತಿಲ್ಲ.
ಹಬ್ಬ, ಸಾವು, ನೋವು, ಆಚರಣೆಗಳ ವಿಚಾರದಲ್ಲೂ ಕುಟುಂಬವನ್ನು ಗ್ರಾಮಸ್ಥರು ಹೊರಗೆ ಹೊರಗೆ ಇಟ್ಟಿದ್ದಾರೆ ಸುರೇಶ್ ಹಾಗೂ ಆತನ ತಾಯಿ ಮಹದೇವಮ್ಮ ಇಬ್ಬರನ್ನು ಗ್ರಾಮಸ್ಥರು ಹೊರಗಿಟ್ಟಿದ್ದಾರೆ.. ಪತಿ ಹಾಗೂ ಮಗ ತೀರಿಕೊಂಡಾಗಲೂ ಇವರ ಸಹಾಯಕ್ಕೆ ಯಾರು ಬಂದಿಲ್ಲ, ಕುಟುಂಬದ ಜೊತೆ ಯಾರೇ ಸಂಪರ್ಕಕ್ಕೆ ಬಂದರೂ 5 ಸಾವಿರ ದಂಡ ವಿಧಿಸಬೇಕು ಎಂದು ಊರಿನ ಯಜಮಾನರು ತಿಳಿಸಿದ್ದಾರೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!