CM ಸಿದ್ದು ತವರು ಕ್ಷೇತ್ರದಲ್ಲಿ ಸಾಮಾಜಿಕ ಬಹಿಷ್ಕಾರ ಜೀವಂತ….!

ಗ್ರಾಮದ ಯಜಮಾನರ ಮಾತು ಕೇಳದಕ್ಕೆ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರವನ್ನು ನೀಡಿದ್ದಾರೆ, ದಲಿತ ಸಮುದಾಯದ ಕುಟುಂಬಸ್ಥರಿಗೆ ಬಹುಷ್ಕಾರ ನೀಡಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರ ತವರೂರು ಸಿದ್ದರಾಮಯ್ಯ ಹುಂಡಿಯ ಪಕ್ಕದ ಗ್ರಾಮ ಶ್ರೀನಿವಾಸಪುರದಲ್ಲಿ ಅಮಾನವೀಯ ಘಟನೆ ನಡೆದಿದೆ.
ಯಜಮಾನರುಗಳಾದ ಚಿಕ್ಕಂಡಯ್ಯ, ಬಸವಯ್ಯ, ಮಹದೇವು, ಮೋಟಮಹದೇವಯ್ಯ ಮತ್ತು ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಮಹದೇವು ಹಾಗೂ ಬೊಮ್ಮಾಯಿ ಅವರಿಂದ ಗ್ರಾಮದ ಸುರೇಶ್ ಎಂಬುವರ ಕುಟುಂಬಕ್ಕೆ ನಾಲ್ಕು ವರ್ಷಗಳಿಂದ ಬಹಿಷ್ಕಾರವನ್ನು ಹಾಕಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಗಲಾಟೆ ಸಂಬಂಧ ನ್ಯಾಯ ಪಂಚಾಯತಿ ಮಾಡಲಾಗಿತ್ತು.
ರಂಗನಾಥಪುರ ಗ್ರಾಮದ ಪ್ರಮೋದ್ ಹಾಗೂ ಸುರೇಶ್ ನಡುವೆ ಗಲಾಟೆ ನಡೆದಿತ್ತು. ಪ್ರಮೋದ್ ಕಡೆಯವರು ಸುರೇಶ್ ಮನೆಗೆ ನುಗ್ಗಿ ಗಲಾಟೆ ಮಾಡಿ ಮನೆ ವಸ್ತುಗಳನ್ನು ಹಾಳು ಮಾಡಿದ್ದರು. ಇದರ ಬಗ್ಗೆ ನ್ಯಾಯ ಪಂಚಾಯತಿ ಮಾಡಿ ಇಬ್ಬರಿಗೂ ದಂಡ ಹಾಕಲಾಗಿತ್ತು.
ಪ್ರಮೋದ್‌ಗೆ 25 ಸಾವಿರ ಹಾಗೂ ಸುರೇಶ್‌ಗೆ 15 ಸಾವಿರ ದಂಡ ಹಾಕಿದ್ದರು. ತಮಗೆ ಅನ್ಯಾಯ ಆಗಿರುವ ಕಾರಣಕ್ಕೆ ದಂಡ ಕಟ್ಟಲ್ಲ ಎಂದಿದ್ದ ಸುರೇಶ್,
ಪಂಚಾಯಿತಿಯಲ್ಲಿ ತಮಗೆ ಮುಜುಗರ ಆಗಿದೆ ತಮ್ಮ ಮಾತು ಕೇಳಿಲ್ಲ ಎಂದು ಸುರೇಶ್ ಮೇಲೆ ಕೋಪಗೊಂಡಿದ್ದ ಯಜಮಾನರು ಅದೇ ಕೋಪದಲ್ಲಿ ತಪ್ಪು ಕಾಣಿಕ ಕಟ್ಟುವ ವರೆಗೂ ತಮ್ಮ ಕುಲಕ್ಕೆ ಸೇರಿಸಲ್ಲ ಎಂದು ಬಹಿಷ್ಕಾರ ಮಾಡಿದ್ದಾರೆ
ಬಹಿಷ್ಕಾರ ಸಂಬಂಧ ಜಿಲ್ಲಾಧಿಕಾರಿ, ಪೊಲೀಸರು, ತಹಸೀಲ್ದಾರ್ ಗೆ ದೂರು ನೀಡಿದರು. ಸಿಎಂ ಸಿದ್ದರಾಮಯ್ಯ, ಮಗ ಯತೀಂದ್ರ ಬಳಿ ಕಷ್ಟ ಹೇಳಿಕೊಂಡರೂ ಇವರಿಗೂ ಯಾವುದೇ ಪರಿಹಾರ ದೊರತಿಲ್ಲ.
ಹಬ್ಬ, ಸಾವು, ನೋವು, ಆಚರಣೆಗಳ ವಿಚಾರದಲ್ಲೂ ಕುಟುಂಬವನ್ನು ಗ್ರಾಮಸ್ಥರು ಹೊರಗೆ ಹೊರಗೆ ಇಟ್ಟಿದ್ದಾರೆ ಸುರೇಶ್ ಹಾಗೂ ಆತನ ತಾಯಿ ಮಹದೇವಮ್ಮ ಇಬ್ಬರನ್ನು ಗ್ರಾಮಸ್ಥರು ಹೊರಗಿಟ್ಟಿದ್ದಾರೆ.. ಪತಿ ಹಾಗೂ ಮಗ ತೀರಿಕೊಂಡಾಗಲೂ ಇವರ ಸಹಾಯಕ್ಕೆ ಯಾರು ಬಂದಿಲ್ಲ, ಕುಟುಂಬದ ಜೊತೆ ಯಾರೇ ಸಂಪರ್ಕಕ್ಕೆ ಬಂದರೂ 5 ಸಾವಿರ ದಂಡ ವಿಧಿಸಬೇಕು ಎಂದು ಊರಿನ ಯಜಮಾನರು ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!