ಸಾಲು ಮರದ ತಿಮ್ಮಕ್ಕ ನವರ ನಿ*ನಕ್ಕೆ ಸಿಎಂ ಸಂತಾಪ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.

ನವೆಂಬರ್ 14: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

 

 

 

 

 

ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದರು.

ತಿಮ್ಮಕ್ಕ ಅವರ ಕೊನೆ ಆಸೆ: ಪರಿಶೀಲಿಸಿ ಕ್ರಮ

 

 

 

 

 

ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಹೇಳಿದರು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!