ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದರು.

ಏಷ್ಯಾ ಅಭಿವೃದ್ಧಿಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಜಾರಿಗೊಳಿಸಿ, 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ರೂಪಿಸಲಾಗುತ್ತಿದೆ.
ಸರ್ಕಾರಿ ಪ್ರಥಮ ದರ್ಜೆ ಮತ್ತು ಇಂಜಿನಿಯ ರಿಂಗ್ ಕಾಲೇಜುಗಳಲ್ಲಿ 2,000 ಹಾಗೂ ಸಾರ್ವ ಜನಿಕ ವಿವಿಗಳಲ್ಲಿ 1,000 ಬೋಧಕ ಹುದ್ದೆ ಗಳನ್ನು ಭರ್ತಿ ಮಾಡಲಾಗುವುದು.
ಮಹಿಳಾ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಒದಗಿಸಲು 25 ಸರ್ಕಾರಿ ಪದವಿ ಕಾಲೇಜುಗಳು ಸೇರಿ ಒಟ್ಟು 31 ಸಂಸ್ಥೆಗಳಿಗೆ 31 ಕೋಟಿ ರೂ.ನೀಡಲಾಗುವುದು. ಸ್ಟೆಮ್ ವಿಭಾಗದ 3,000 ಮಹಿಳಾ ಪದವೀಧರರಿಗೆ 13.50 ಕೋಟಿ ರೂ. ವೆಚ್ಚ ದಲ್ಲಿ ಕೌಶಲ್ಯ ತರಬೇತಿ ಮತ್ತು ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕಲ್ಪಿಸಲಾಗಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಈ ವರ್ಷವೂ 100 ಕೋಟಿ ಒದಗಿಸಲಾಗುವುದು. ಧಾರವಾಡ ಮತ್ತು ಬೆಂಗಳೂರಿನಲ್ಲಿ ತಲಾ 10 ಕೋಟಿ ವೆಚ್ಚದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ಸ್ಥಾಪನೆ, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿವಿ ಸ್ಥಾಪನೆಗೆ 25 ಎಕರೆ ಜಮೀನು ಮಂಜೂರು ಮಾಡಲಾಗಿದೆ.

ವಿದ್ಯಾರ್ಥಿ ಗಳಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ಒದಗಿಸಲು ‘ಉತ್ತಮ ಕಲಿಕೆ ಉಜ್ವಲ ಭವಿಷ್ಯ’ ಎಂಬ ಘೋಷವಾಕ್ಯದಡಿ ಒಟ್ಟು 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿ ಸಲು ತೀರ್ಮಾನಿಸಿದ್ದು, ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚ ಮಾಡಲಾಗುವುದು. 184 ಹಿರಿಯ
ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜು ಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದರು.

ಶಾಲೆಗಳ ಕೊಠಡಿ ನಿರ್ಮಾಣ ಹಾಗೂ ದುರಸ್ತಿಗೆ 565 ಕೋಟಿ ರೂ, ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ಮತ್ತು ನಿರ್ವಹಣೆಗಾಗಿ 125 ಕೋಟಿ ರೂ. ಅನುದಾನವನ್ನು ಎಸ್‌ಡಿಎಂಸಿಗಳಿಗೆ ನೇರವಾಗಿ ಬಿಡು ಗಡೆ ಮಾಡಲಾಗುವುದು. ವಿದ್ಯಾವಿಕಾಸ ಯೋಜನೆ ಯಡಿ ಪೂರ್ವ ಪ್ರಾಥಮಿಕ ಮಕ್ಕಳಿಗೆ ಚಟುವಟಿಕೆ ಪುಸ್ತಕಗಳು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಲಾಗುವುದು. ಐಐಟಿ ಧಾರವಾಡದ ಸಹಯೋಗದಲ್ಲಿ 8 ರಿಂದ 12ನೇ ತರಗತಿಯ 12.28 ಲಕ್ಷ ವಿದ್ಯಾರ್ಥಿಗಳಿಗೆ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ‘ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್’ ಸೌಲಭ್ಯ ಕಲ್ಪಿಸಲಾಗುವುದು.

ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ ನಿವಾರಿಸಲು 204 ಬಿಆರ್‌ಸಿ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ ಹಾಗೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾ ಜಿಕ ಜಾಲತಾಣ ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ, ಇದಲ್ಲದೆ, ವಿದ್ಯಾರ್ಥಿಗಳಿಗೆ ನೀಡುವ ಸವಲತ್ತುಗಳನ್ನು ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮವಹಿಸಲಾಗಿದೆ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!