4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ KRSಗೆ ಬಾಗಿನ ಸಮರ್ಪಣೆ..

ಮಂಡ್ಯ: 93 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ಎಸ್ (ಕೃಷ್ಣರಾಜಸಾಗರ) ಡ್ಯಾಂ ಸಂಪೂರ್ಣ ಭರ್ತಿ ಆಗಿದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು ಬಾಗಿನ ಸಮರ್ಪಣೆ ಮಾಡಿದರು. ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚೆಲುವರಾಯಸ್ವಾಮಿ ಹಾಗೂ ಹೆಚ್.ಸಿ ಮಹದೇವಪ್ಪ ಸೇರಿ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ಸಿಎಂ ಸಿದ್ದರಾಮಯ್ಯ ಅವರು ಅಭಿಜಿತ್ ಶುಭ ಮುಹೂರ್ತದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದರು. ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯಗಳು ನೆರವೇರಿದವು. ಕೆಆರ್ಎಸ್ ಜಲಾಶಯಕ್ಕೆ 4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿ ಖುಷಿ ಪಟ್ಟರು. ನಂತರ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಇದೇ ವೇಳೆ ನಾಡಿನ ಜನರಿಗೆ ಒಳ್ಳೆಯದಾಗಲಿ ಎಂದು ತಾಯಿ ಕಾವೇರಿ ಬಳಿ ಪ್ರಾರ್ಥನೆ ಮಾಡಿದರು.

ದಾಖಲೆ ಬರೆದ ಸಿಎಂ
ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಜೂನ್ನಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸಿದ ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಿದ್ದಾರೆ. 1979 ರಂದು ಡಿ ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಕಾರ್ಯಕ್ರಮ ಆರಂಭವಾದರೂ ಈ ಹಿಂದಿನ ಯಾವ ಮುಖ್ಯಮಂತ್ರಿ ಕೂಡ ಜೂನ್ನಲ್ಲಿ ಬಾಗಿನ ಅರ್ಪಿಸಿರಲಿಲ್ಲ. ಆದರೆ ಈಗ ಸಿಎಂ ಸಿದ್ದರಾಮಯ್ಯ ಅವರು ಜೂನ್ನಲ್ಲೇ ಕೆಆರ್ಎಸ್ಗೆ ಬಾಗಿನ ಸಮರ್ಪಣೆ ಮಾಡಿ ನೂತನ ದಾಖಲೆ ಬರೆದಿದ್ದಾರೆ.

ಕೆಆರ್ಎಸ್ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಶೃಂಗಾರ ಮಾಡಲಾಗಿತ್ತು. ಅಣೆಕಟ್ಟೆ ಗೋಡೆಗೆ ಸುಣ್ಣ, ಬಣ್ಣ ಬಳೆದಿದ್ದು ಎಲ್ಲೆಡೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದವು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚಲುವರಾಯಸ್ವಾಮಿ, ಹೆಚ್. ಸಿ ಮಹದೇವಪ್ಪ, ಕೆ ವೆಂಕಟೇಶ್, ಎನ್.ಎಸ್ ಬೋಸರಾಜು ಹಾಗೂ ಸ್ಥಳೀಯ ಶಾಸಕರು ಇದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!