ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ. ವಾಲ್ಮೀಕಿಯವರು ಸಂಸ್ಕೃತದಲ್ಲಿ 20 ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು ರಾಮಾಯಣ ರಚಿಸಿದ್ದು ಬಹಳ ದೊಡ್ಡ ಹೋರಾಟ ಮತ್ತು ಸಾಧನೆ ಎಂದರು.

ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ್ದೇನೆ. ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದಾರೆ. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ 443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ಎಂದು ಪ್ರಶ್ನಿಸಿದರು.

ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!