ದಾಖಲೆ ಬರೆಯಲು ಸಿದ್ಧರಾದ್ರು ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಕರ್ನಾಟಕದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಒಬ್ಬರಾಗಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಹೊಸದೊಂದು ದಾಖಲೆ ಬರೆಯುವ ಸುವರ್ಣ ಅವಕಾಶ ಒದಗಿ ಬಂದಿದೆ. ಅದನ್ನು ಬಳಸಿಕೊಳ್ಳಲಿರುವ ಅವರು ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲಿದ್ದಾರೆ. ಅಂದಹಾಗೆ ಆ ದಾಖಲೆ ಯಾವುದು?

 

 

 

 

 

ಹೌದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಜೂನ್ ತಿಂಗಳಲ್ಲಿಯೇ ಬಾಗಿನ ಅರ್ಪಿಸಲಿದ್ದಾರೆ. ಇದಕ್ಕೆ ಕಾರಣ ಅವಧಿಪೂರ್ವ ಮುಂಗಾರು ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಭಾರಿ ಮಳೆಯಾಗುತ್ತಿರುವುದು.
ಜೂನ್ 30ರಂದು, ಅಂದರೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್​ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದಾರೆ. ಈ ಬಗ್ಗೆ ಈಗಾಗಲೇ ಕೆಆರ್​ಎಸ್ ಡ್ಯಾಂ ಆಡಳಿತ ಮತ್ತು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿವೆ.

ಜೂನ್ ತಿಂಗಳಲ್ಲೇ ಭರ್ತಿಯಾದ ಕೆಆರ್​ಎಸ್ ಡ್ಯಾಂ
ಕೆಆರ್​ಎಸ್ ಡ್ಯಾಂಸಾಮಾನ್ಯವಾಗಿ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತಾರೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದ್ದು, ಸಿದ್ದರಾಮಯ್ಯನವರಿಗೆ ಹೊಸ ಅವಕಾಶ ದೊರೆತಿದೆ.

 

 

 

 

 

 

 

ಕೆಆರ್​ಎಸ್ ಡ್ಯಾಂ ನೀರಿನ ಮಟ್ಟದ ವಿವರ
ಶನಿವಾರ ಬೆಳಗ್ಗಿನ ಮಾಹಿತಿಯ ಪ್ರಕಾರ, ಕೆಆರ್​​ಎಸ್ ಡ್ಯಾಂ 123.25 ಅಡಿ ಭರ್ತಿಯಾಗಿದೆ. ಅಂದರೆ, 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್​ಎಸ್ ಜಲಾಶಯ ಪೂರ್ಣ ಭರ್ತಿಯಾಗಲು ಇನ್ನು ಒಂದು ಅಡಿ ಅಷ್ಟೇ ಬಾಕಿ ಇದೆ. ಅದು ಇಂದೇ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಲಿದೆ. ಇದರೊಂದಿಗೆ, 93 ವರ್ಷಗಳ ಬಳಿಕ ಇದೇ ಮೊದಲ ಬಾರಿ ಜೂನ್​ ತಿಂಗಳಲ್ಲೇ ಕೆಆರ್​ಎಸ್ ಡ್ಯಾಂ ಭರ್ತಿಯಾದಂತಾಗಲಿದೆ.

ಕೆಆರ್​ಎಸ್​ಗೆ ಮುಖ್ಯಮಂತ್ರಿಯಿಂದ ಬಾಗಿನ ಅರ್ಪಣೆ ಶುರುವಾಗಿದ್ದು ಯಾವಾಗ?
1979 ರಿಂದ ಕೆಆರ್​ಎಸ್ ಡ್ಯಾಂನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಪದ್ದತಿ ಆರಂಭವಾಗಿತ್ತು. ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸ್ ಅವರು ಬಾಗಿನ ಅರ್ಪಿಸುವ ಮೂಲಕ ಆ ಪದ್ದಗೆ ನಾಂದಿ ಹಾಡಿದ್ದರು. ಆದರೆ, ಅಂದಿನಿಂದ ಇಂದಿನವರೆಗೂ ಯಾವೊಬ್ಬ ಮುಖ್ಯಮಂತ್ರಿಗೂ ಜೂನ್ ತಿಂಗಳಲ್ಲೇ ಬಾಗಿನ ಅರ್ಪಿಸುವ ಅವಕಾಶ ಒದಗಿ ಬಂದಿಲ್ಲ.

ಇದೀಗ ಸೋಮವಾರ ಸಿಎಂ ಸಿದ್ದರಾಮಯ್ಯ ಕೆಆರ್​​ಎಸ್​ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಡ್ಯಾಂ ಅವಧಿಗೂ ಮುನ್ನವೇ ತುಂಬುತ್ತಿರುವುದು ರೈತರ ಮುಖದಲ್ಲೂ ಮಂದಹಾಸ ಮೂಡಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!