ದಾಖಲೆ ಬರೆಯಲು ಸಿದ್ಧರಾದ್ರು ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಕರ್ನಾಟಕದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಒಬ್ಬರಾಗಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಹೊಸದೊಂದು ದಾಖಲೆ ಬರೆಯುವ ಸುವರ್ಣ ಅವಕಾಶ ಒದಗಿ ಬಂದಿದೆ. ಅದನ್ನು ಬಳಸಿಕೊಳ್ಳಲಿರುವ ಅವರು ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲಿದ್ದಾರೆ. ಅಂದಹಾಗೆ ಆ ದಾಖಲೆ ಯಾವುದು?

 

 

 

 

 

ಹೌದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಜೂನ್ ತಿಂಗಳಲ್ಲಿಯೇ ಬಾಗಿನ ಅರ್ಪಿಸಲಿದ್ದಾರೆ. ಇದಕ್ಕೆ ಕಾರಣ ಅವಧಿಪೂರ್ವ ಮುಂಗಾರು ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಭಾರಿ ಮಳೆಯಾಗುತ್ತಿರುವುದು.
ಜೂನ್ 30ರಂದು, ಅಂದರೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್​ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದಾರೆ. ಈ ಬಗ್ಗೆ ಈಗಾಗಲೇ ಕೆಆರ್​ಎಸ್ ಡ್ಯಾಂ ಆಡಳಿತ ಮತ್ತು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿವೆ.

ಜೂನ್ ತಿಂಗಳಲ್ಲೇ ಭರ್ತಿಯಾದ ಕೆಆರ್​ಎಸ್ ಡ್ಯಾಂ
ಕೆಆರ್​ಎಸ್ ಡ್ಯಾಂಸಾಮಾನ್ಯವಾಗಿ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತಾರೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದ್ದು, ಸಿದ್ದರಾಮಯ್ಯನವರಿಗೆ ಹೊಸ ಅವಕಾಶ ದೊರೆತಿದೆ.

 

 

 

 

 

 

 

ಕೆಆರ್​ಎಸ್ ಡ್ಯಾಂ ನೀರಿನ ಮಟ್ಟದ ವಿವರ
ಶನಿವಾರ ಬೆಳಗ್ಗಿನ ಮಾಹಿತಿಯ ಪ್ರಕಾರ, ಕೆಆರ್​​ಎಸ್ ಡ್ಯಾಂ 123.25 ಅಡಿ ಭರ್ತಿಯಾಗಿದೆ. ಅಂದರೆ, 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್​ಎಸ್ ಜಲಾಶಯ ಪೂರ್ಣ ಭರ್ತಿಯಾಗಲು ಇನ್ನು ಒಂದು ಅಡಿ ಅಷ್ಟೇ ಬಾಕಿ ಇದೆ. ಅದು ಇಂದೇ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಲಿದೆ. ಇದರೊಂದಿಗೆ, 93 ವರ್ಷಗಳ ಬಳಿಕ ಇದೇ ಮೊದಲ ಬಾರಿ ಜೂನ್​ ತಿಂಗಳಲ್ಲೇ ಕೆಆರ್​ಎಸ್ ಡ್ಯಾಂ ಭರ್ತಿಯಾದಂತಾಗಲಿದೆ.

ಕೆಆರ್​ಎಸ್​ಗೆ ಮುಖ್ಯಮಂತ್ರಿಯಿಂದ ಬಾಗಿನ ಅರ್ಪಣೆ ಶುರುವಾಗಿದ್ದು ಯಾವಾಗ?
1979 ರಿಂದ ಕೆಆರ್​ಎಸ್ ಡ್ಯಾಂನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಪದ್ದತಿ ಆರಂಭವಾಗಿತ್ತು. ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸ್ ಅವರು ಬಾಗಿನ ಅರ್ಪಿಸುವ ಮೂಲಕ ಆ ಪದ್ದಗೆ ನಾಂದಿ ಹಾಡಿದ್ದರು. ಆದರೆ, ಅಂದಿನಿಂದ ಇಂದಿನವರೆಗೂ ಯಾವೊಬ್ಬ ಮುಖ್ಯಮಂತ್ರಿಗೂ ಜೂನ್ ತಿಂಗಳಲ್ಲೇ ಬಾಗಿನ ಅರ್ಪಿಸುವ ಅವಕಾಶ ಒದಗಿ ಬಂದಿಲ್ಲ.

ಇದೀಗ ಸೋಮವಾರ ಸಿಎಂ ಸಿದ್ದರಾಮಯ್ಯ ಕೆಆರ್​​ಎಸ್​ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಡ್ಯಾಂ ಅವಧಿಗೂ ಮುನ್ನವೇ ತುಂಬುತ್ತಿರುವುದು ರೈತರ ಮುಖದಲ್ಲೂ ಮಂದಹಾಸ ಮೂಡಿಸಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!