2,500 ರೂಪಾಯಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿಸಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ 7 ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿ ಮಾಡಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರು ನಿತ್ಯ ಸಂಚಾರ ಮಾಡುವ ಫಾರ್ಚೂನರ್ ಕಾರು 2024ರಿಂದ ಈವರೆಗೂ 7 ಬಾರಿ ಸಂಚಾರ ನಿಯಮಗಳ ಉಲ್ಲಂಘನೆ ಮಾಡಿರುವುದು ಇದೆ. ಈ ಪೈಕಿ 6 ಪ್ರಕರಣಗಳು ಸೀಟು ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿದ ಕೇಸ್ ಆಗಿವೆ. ಇವು ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್​ಮೆಂಟ್ ಸಿಸ್ಟಂನಲ್ಲಿ (ಐಟಿಎಂಎಸ್) ಸಂಚಾರ ನಿಯಮ ಉಲ್ಲಂಘಿಸಿರುವುದು ಸೆರೆಯಾಗಿತ್ತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ದಂಡ ಪಾವತಿ ಆಗಿದೆ. ಸದ್ಯ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶೇ.50ರಷ್ಟು ದಂಡ ಪಾವತಿಯ ಆಫರ್ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುತ್ತಿದ್ದಾರೆ. ಇದೇ ಆಫರ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರಿಗಳು 2,500 ರೂಪಾಯಿ ದಂಡ ಪಾವತಿ ಮಾಡಿದ್ದಾರೆ. ಇದರಿಂದ ಟ್ರಾಫಿಕ್ ನಿಯಮ ಉಲ್ಲಂಘನೆ ಕೇಸ್​ಗಳು ಕ್ಲೀಯರ್ ಆಗಿವೆ.

ಈ ವರ್ಷ ಜುಲೈ 9ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ಏರ್​ಪೋರ್ಟ್ ಎಕ್ಸ್​ಪ್ರೆಸ್ ಕಾರಿಡಾರ್​ನಲ್ಲಿ ಸಿಎಂ ಅವರಿದ್ದ ಕಾರು ಓವರ್ ಸ್ಟೀಡಾಗಿ ಚಲಾಯಿಸಿ ನಿಯಮ ಉಲ್ಲಂಘಿಸಿತ್ತು.2024ರ ಜನವರಿ 24ರಂದು ಮಧ್ಯಾಹ್ನ 12.19ರಂದು ಒಲ್ಡ್ ಏರ್​ಪೋರ್ಟ್ ರಸ್ತೆಯ ಲೀಲಾ ಪ್ಯಾಲೇಸ್ ಜಂಕ್ಷನ್ ಬಳಿ ಹೋಗುವಾಗ ಸಿದ್ದರಾಮಯ್ಯ ಅವರು ಸೀಟು ಬೆಲ್ಟ್ ಧರಿಸಿಲ್ಲ. ಅದೇ ಜಂಕ್ಷನ್​ನಲ್ಲಿ ಫೆಬ್ರುವರಿ ಹಾಗೂ ಆಗಸ್ಟ್​ನಲ್ಲಿ ಮತ್ತೆರಡು ಪ್ರಕರಣಗಳು ದಾಖಲಾಗಿದ್ದವು. ಮಾರ್ಚ್​​ನಲ್ಲಿ ಚಂದ್ರಿಕಾ ಹೋಟೆಲ್​ ಜಂಕ್ಷನ್ ಹಾಗೂ ಆಗಸ್ಟ್​ನಲ್ಲಿ ಶಿವಾನಂದ ಸರ್ಕಲ್ ಹಾಗೂ ಡಾ.ರಾಜ್​ಕುಮಾರ್ ಪ್ರತಿಮೆ ಜಂಕ್ಷನ್​ಗಳ ಬಳಿ ಸೀಟು ಬೆಲ್ಟ್ ಧರಿಸಿದೇ ನಿಯಮ ಉಲ್ಲಂಘಿಸಿದ ಪ್ರಕರಣಗಳು ದಾಖಲಾಗಿದ್ದವು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!