‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು

‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಈ ಹೇಳಿಕೆಯು ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ದಿನಕ್ಕೊಂದು ಸ್ವರೂಪ, ತಂತ್ರಗಾರಿಕೆ, ಕ್ಷಣಕ್ಕೊಂದು ತಿರುವು ಪಡೆಯುತ್ತಲೇ ಇದೆ. ಹಳ್ಳಿಯಿಂದ ಹಿಡಿದು ದೆಹಲಿಯ ತನಕ ಪಟ್ಟದ ರಾಜಕಾರಣ ಜೋರಾಗಿ ನಡೆಯುತ್ತಿದೆ. ಕಳೆದ ಹತ್ತು ದಿನಗಳಿಂದ ಮಂಡಿ ನೋವಿನಿಂದ ಓಡಾಡಲು ಅಸಾಧ್ಯವಾದರೂ ಕುಳಿತಲ್ಲೇ ಇರುವಂತಾಗಿದ್ದರೂ ಸಿಎಂ ಸಿದ್ದರಾಮಯ್ಯ ಉರುಳಿಸುತ್ತಿರುವ ದಾಳ ಅಸಾಧ್ಯವಾದ್ದು. ಸಿಎಂ ಸಿದ್ದರಾಮಯ್ಯ ಇದೀಗ ಮನಸ್ಸಿನ ಮಾತೊಂದನ್ನು ಬಿಚ್ಚಿಟ್ಟಿದ್ದು ಕಾಂಗ್ರೆಸ್​ನ ಆಂತರಿಕ ರಾಜಕಾರಣ ಅಷ್ಟು ಸುಲಭ ಇಲ್ಲ ಎಂಬುದನ್ನು ಬಿಂಬಿಸಿದೆ.

 

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ, ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಎಂಬ ದಾಖಲೆಯ ಖ್ಯಾತಿ ತಮಗೇ ಸಿಗಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಸುದೀರ್ಘ ಅವಧಿಗೆ ಸಿಎಂ ಆಗಿ ಸ್ಥಾನ ಅಲಂಕರಿಸಿದ್ದರು. ಬರೋಬ್ಬರಿ ಏಳು ವರ್ಷ ಏಳು ತಿಂಗಳ ಕಾಲ ದೇವರಾಜ ಅರಸು ಸಿಎಂ ಆಗಿ ಅಧಿಕಾರ ನಡೆಸಿದ್ದರು. ದೇವರಾಜ ಅರಸು ಬಳಿಕ ಐದು ವರ್ಷ ಪೂರ್ಣಾವಧಿ ಮುಗಿಸಿದ ಸಿಎಂ ಅಂದರೆ ಅದು ಸಿದ್ದರಾಮಯ್ಯ. ಇದೀಗ ದೇವರಾಜ ಅರಸು ಅವರ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆಯನ್ನು ಮುರಿಯುವುದಕ್ಕೆ ಸಿದ್ದರಾಮಯ್ಯ ಇನ್ನೂ ಕೆಲವು ತಿಂಗಳು ಅಧಿಕಾರದಲ್ಲಿ ಮುಂದುವರಿಯಲೇಬೇಕಿದೆ. ಡಿಸಂಬರ್ ವರೆಗೆ ಸಿದ್ದರಾಮಯ್ಯ ಅನಾಯಾಸವಾಗಿ ಅಧಿಕಾರದಲ್ಲಿ ಮುಂದುವರಿದರೆ ದೇವರಾಜ ಅರಸು ದಾಖಲೆ ಮುರಿದು ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿ ಸಿದ್ದರಾಮಯ್ಯಗೆ ಸಿಗಲಿದೆ. ಇದರ ಬಗ್ಗೆ ತನಗೆ ನಂಬಿಕೆ ಇದೆ ಎಂದಿರುವ ಸಿದ್ದರಾಮಯ್ಯ ಮಾತು ಹೊಸ ಕಿಚ್ಚು ಹಚ್ಚಿಸಿದೆ.

ಸಿದ್ದರಾಮಯ್ಯ ಹೀಗೆ ದಾಖಲೆಯ ಅವಧಿಯ ಬಗ್ಗೆ ಪ್ತಸ್ತಾಪ ಮಾಡುತ್ತಿದ್ದಂತೆಯೇ ಸಿದ್ದರಾಮಯ್ಯ ಆಪ್ತ ಸಚಿವರು ಹಿತೈಷಿಗಳು ಜೈ ಎಂದಿದ್ದಾರೆ.

 

ಸಿದ್ದರಾಮಯ್ಯ ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಡಿಕೆಶಿವಕುಮಾರ್ ಗೆ ಬಿಟ್ಟು ಕೊಡುತ್ತಾರೆ ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್​ನ ಆಂತರಿಕ ವಲಯದಲ್ಲಿ ಚರ್ಚೆಯಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಅಲ್ಲಗಳೆದಿರುವ ಡಾ. ಜಿ ಪರಮೇಶ್ವರ್, ಅಂತಹ ಯಾವುದೇ ಸೂತ್ರದ ಬಗ್ಗೆ ತಮಗೆ ಗೊತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಪೂರ್ಣ ಅವಧಿಗೆ ಸಿಎಂ ಆಗಿರಲಿ ಎಂದಿದ್ದಾರೆ‌. ಎಂಬಿ ಪಾಟೀಲ್, ಎಚ್​ಸಿ ಮಹದೇವಪ್ಪ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.

  • Related Posts

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!