‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು

‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಈ ಹೇಳಿಕೆಯು ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ದಿನಕ್ಕೊಂದು ಸ್ವರೂಪ, ತಂತ್ರಗಾರಿಕೆ, ಕ್ಷಣಕ್ಕೊಂದು ತಿರುವು ಪಡೆಯುತ್ತಲೇ ಇದೆ. ಹಳ್ಳಿಯಿಂದ ಹಿಡಿದು ದೆಹಲಿಯ ತನಕ ಪಟ್ಟದ ರಾಜಕಾರಣ ಜೋರಾಗಿ ನಡೆಯುತ್ತಿದೆ. ಕಳೆದ ಹತ್ತು ದಿನಗಳಿಂದ ಮಂಡಿ ನೋವಿನಿಂದ ಓಡಾಡಲು ಅಸಾಧ್ಯವಾದರೂ ಕುಳಿತಲ್ಲೇ ಇರುವಂತಾಗಿದ್ದರೂ ಸಿಎಂ ಸಿದ್ದರಾಮಯ್ಯ ಉರುಳಿಸುತ್ತಿರುವ ದಾಳ ಅಸಾಧ್ಯವಾದ್ದು. ಸಿಎಂ ಸಿದ್ದರಾಮಯ್ಯ ಇದೀಗ ಮನಸ್ಸಿನ ಮಾತೊಂದನ್ನು ಬಿಚ್ಚಿಟ್ಟಿದ್ದು ಕಾಂಗ್ರೆಸ್​ನ ಆಂತರಿಕ ರಾಜಕಾರಣ ಅಷ್ಟು ಸುಲಭ ಇಲ್ಲ ಎಂಬುದನ್ನು ಬಿಂಬಿಸಿದೆ.

 

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ, ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಎಂಬ ದಾಖಲೆಯ ಖ್ಯಾತಿ ತಮಗೇ ಸಿಗಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಸುದೀರ್ಘ ಅವಧಿಗೆ ಸಿಎಂ ಆಗಿ ಸ್ಥಾನ ಅಲಂಕರಿಸಿದ್ದರು. ಬರೋಬ್ಬರಿ ಏಳು ವರ್ಷ ಏಳು ತಿಂಗಳ ಕಾಲ ದೇವರಾಜ ಅರಸು ಸಿಎಂ ಆಗಿ ಅಧಿಕಾರ ನಡೆಸಿದ್ದರು. ದೇವರಾಜ ಅರಸು ಬಳಿಕ ಐದು ವರ್ಷ ಪೂರ್ಣಾವಧಿ ಮುಗಿಸಿದ ಸಿಎಂ ಅಂದರೆ ಅದು ಸಿದ್ದರಾಮಯ್ಯ. ಇದೀಗ ದೇವರಾಜ ಅರಸು ಅವರ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆಯನ್ನು ಮುರಿಯುವುದಕ್ಕೆ ಸಿದ್ದರಾಮಯ್ಯ ಇನ್ನೂ ಕೆಲವು ತಿಂಗಳು ಅಧಿಕಾರದಲ್ಲಿ ಮುಂದುವರಿಯಲೇಬೇಕಿದೆ. ಡಿಸಂಬರ್ ವರೆಗೆ ಸಿದ್ದರಾಮಯ್ಯ ಅನಾಯಾಸವಾಗಿ ಅಧಿಕಾರದಲ್ಲಿ ಮುಂದುವರಿದರೆ ದೇವರಾಜ ಅರಸು ದಾಖಲೆ ಮುರಿದು ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿ ಸಿದ್ದರಾಮಯ್ಯಗೆ ಸಿಗಲಿದೆ. ಇದರ ಬಗ್ಗೆ ತನಗೆ ನಂಬಿಕೆ ಇದೆ ಎಂದಿರುವ ಸಿದ್ದರಾಮಯ್ಯ ಮಾತು ಹೊಸ ಕಿಚ್ಚು ಹಚ್ಚಿಸಿದೆ.

ಸಿದ್ದರಾಮಯ್ಯ ಹೀಗೆ ದಾಖಲೆಯ ಅವಧಿಯ ಬಗ್ಗೆ ಪ್ತಸ್ತಾಪ ಮಾಡುತ್ತಿದ್ದಂತೆಯೇ ಸಿದ್ದರಾಮಯ್ಯ ಆಪ್ತ ಸಚಿವರು ಹಿತೈಷಿಗಳು ಜೈ ಎಂದಿದ್ದಾರೆ.

 

ಸಿದ್ದರಾಮಯ್ಯ ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಡಿಕೆಶಿವಕುಮಾರ್ ಗೆ ಬಿಟ್ಟು ಕೊಡುತ್ತಾರೆ ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್​ನ ಆಂತರಿಕ ವಲಯದಲ್ಲಿ ಚರ್ಚೆಯಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಅಲ್ಲಗಳೆದಿರುವ ಡಾ. ಜಿ ಪರಮೇಶ್ವರ್, ಅಂತಹ ಯಾವುದೇ ಸೂತ್ರದ ಬಗ್ಗೆ ತಮಗೆ ಗೊತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಪೂರ್ಣ ಅವಧಿಗೆ ಸಿಎಂ ಆಗಿರಲಿ ಎಂದಿದ್ದಾರೆ‌. ಎಂಬಿ ಪಾಟೀಲ್, ಎಚ್​ಸಿ ಮಹದೇವಪ್ಪ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.

  • Related Posts

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

    ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

      ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!