ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ.

ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು.

ಸಾಂದರ್ಭಿಕ ಚಿತ್ರ

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳು ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಯ ನಂತರ ಕೆ‌ಆರ್.ಎಸ್ ಗೆ ಆಗಮಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.
ವೇದಿಕೆ, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದು ಸೂಚನೆ ನೀಡಿದರು.

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ
ಸರ್ಕಾರ ಇ- ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಅವಶ್ಯಕವಿರುವ ಲ್ಯಾಪ್ ಟಾಪ್ ಅನ್ನು ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಒದಗಿಸಿದ್ದು, ಸಂಕೇತಿಕವಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಲ್ಯಾಪ್ ಟಾಪ್ ವಿತರಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದಲ್ಲಿ ಸರ್ಕಾರಿ ಕೆಲಸಗಳನ್ನು ಇ- ಆಫೀಸ್ ಮೂಲಕ ನಿರ್ವಹಿಸಬೇಕಿದ್ದು, ಕೆಲಸವನ್ನು ಪಾರದರ್ಶಕ ಹಾಗೂ ದಕ್ಷತೆಯಿಂದ ನಿರ್ವಹಿಸಿ ಎಂದರು.
ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳ ಗಣಕೀಕರಣ ಪ್ರಕ್ರಿಯೆ ತಾಲ್ಲೂಕು ಕಚೇರಿಗಳಲ್ಲಿ ನಡೆಯುತ್ತಿದ್ದು, ಮಂಡ್ಯ ತಾಲ್ಲೂಕು ಕಚೇರಿಯಿಂದ ಸಂಕೇತಿಕವಾಗಿ ಗಣಕೀಕೃತ ಪ್ರತಿಯನ್ನು ಸಚಿವ ಚಲುವರಾಯಸ್ವಾಮಿ ವಿತರಿಸಿದರು.

ಸಭೆಯಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕಾ.ನೀ.ನಿ.ನಿ ಅಧೀಕ್ಷಕ ಅಭಿಯಂತರ ರಘುರಾಮ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!