ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ!

ಮಂಡ್ಯ: ಇಂದು ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯ ಶೃಂಗಾರಗೊಂಡಿದೆ. ಕನ್ನಂಬಾಡಿ ಕಟ್ಟೆ ಹಸಿರು ತಳಿರು-ತೋರಣ ಹೂಗಳಿಂದ ಹಾಗೂ ಕನ್ನಡ ಬಾವುಟಗಳಿಂದ ಕಂಗೊಳಿಸುತ್ತಿದ್ದು ನೋಡುಗರನ್ನು ಸೆಳೆಯುವಂತ್ತಿದೆ.


ಕೆಆರ್ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಐತಿಹಾಸಕ ದಾಖಲೆ ಬರೆದಿದೆ. ಡ್ಯಾಂ ನಿರ್ಮಾಣ ಆದಾಗಿನಿಂದ ಜೂನ್ ತಿಂಗಳಲ್ಲಿ ಇದುವರೆಗೂ ತುಂಬಿರಲಿಲ್ಲ. ಆದರೆ 93 ವರ್ಷಗಳ ನಂತರ ಮೊಟ್ಟ ಮೊದಲ ಬಾರಿಗೆ ಈಗ ಕೆಆರ್ಎಸ್ ಭರ್ತಿಯಾಗಿದೆ. 124.80 ಅಡಿಗಳ ಗರಿಷ್ಠ ಮಟ್ಟ ಸಂಪೂರ್ಣ ಭರ್ತಿ ಆಗಿದ್ದು ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ.

ಈ ಹಿನ್ನೆಲೆಯಲ್ಲಿ ಇಂದು 11.30ಕ್ಕೆ ಅಭಿಜಿತ್ ಶುಭ ಮುಹೂರ್ತದಲ್ಲಿ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಣೆ ಮಾಡಲಿದ್ದಾರೆ. ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಲಿದೆ. ಸಿದ್ದರಾಮಯ್ಯಗೆ ನಾಲ್ಕನೇ ಬಾರಿಗೆ ಬಾಗಿನ ಅರ್ಪಿಸುವ ಸೌಭಾಗ್ಯ ದೊರಕಿದೆ. ಇದಾದ ಬಳಿಕ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.

ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಸಾಂದರ್ಭಿಕ ಚಿತ್ರ
ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಜೂನ್ನಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸುತ್ತಿರುವ ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಆಗಲಿದ್ದಾರೆ. 1979 ರಂದು ಡಿ ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಕಾರ್ಯಕ್ರಮ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಜೂನ್ನಲ್ಲಿ ಯಾರು ಬಾಗಿನ ಸಲ್ಲಿಸಿರಲಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ನೂತನ ದಾಖಲೆ ಬರೆಯಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!