CM ಸಿದ್ದರಾಮಯ್ಯ ದೆಹಲಿಯಲ್ಲಿ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಭೇಟಿ.

ದೆಹಲಿ :- CM ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ, ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಪತ್ರದ ವಿವರ ಹೀಗಿದೆ
ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.


ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.
ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ 70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ. ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿ ದ್ದಾರೆ.

ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿಗಳ ಭೂ ಸ್ವಾಧೀನದ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೋರಿದೆ

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!