ಮೀನಿನ ಹೊಟ್ಟೆಯಲ್ಲಿತ್ತು ನಾಗರಹಾವು ! ಸಾರು ಮಾಡಲು ಹೋಗಿ ಶಾಕ್ ಆದ ಮಹಿಳೆ !..

ಕೇರಳದ ಅಲಪ್ಪುಳ ಜಿಲ್ಲೆಯ ಚಾರುಮ್ಮೂಡ್ ಮೂಲದ ಸನೋಜ್​​ಗೆ ಮೀನುಗಾರಿಕೆ ಎಂದರೆ ಬಾಲ್ಯದಿಂದಲೂ ತುಂಬಾನೇ ಇಷ್ಟ. ಮದ್ವೆಯಾದ ನಂತರವೂ ಅವರು ಮೀನುಗಾರಿಕೆ ನಡೆಸಿಕೊಂಡು ಬಂದಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯ ಚಾರುಮ್ಮೂಡ್ ಮೂಲದ ಸನೋಜ್​​ಗೆ ಮೀನುಗಾರಿಕೆ ಎಂದರೆ ಬಾಲ್ಯದಿಂದಲೂ ತುಂಬಾನೇ ಇಷ್ಟ. ಮದ್ವೆಯಾದ ನಂತರವೂ ಅವರು ಮೀನುಗಾರಿಕೆ ನಡೆಸಿಕೊಂಡು ಬಂದಿದ್ದಾರೆ.

ಹೊಟ್ಟೆಯಲ್ಲಿ ಏನಿತ್ತು..?
ಅಂತೆಯೇ ಈಗ ಮಳೆಗಾಲ ಬೇರೆ! ಕೆರೆ, ಹೊಳೆಗಳಿಗೆ ಹೋಗಿ ಮೀನು ಹಿಡಿಯುತ್ತಿದ್ದರು. ನಿನ್ನೆ ಸಂಜೆ ಮನೆಯ ಕೆಲಸಗಳನ್ನು ಮುಗಿಸಿ ಕೊಳದಲ್ಲಿ ಮೀನು ಹಿಡಿಯಲು ಹೋಗಿದ್ದರು. ಗಾಳ ಹಾಕಿ ಕೂತಾಗ ಮೀನೊಂದು ಕಚ್ಚಿತ್ತು. ಗಾಳಕ್ಕೆ ಸಿಲುಕಿರೋದು ಪಕ್ಕಾ ಆಗ್ತಿದ್ದಂತೆಯೇ ಎಳೆದಾಗ ಬರೋಬ್ಬರಿ 900 ಗ್ರಾಂ ತೂಕ ಇರುವ ಮುರ್ರೆ ಮೀನು ಬಲೆಗೆ ಬಿದ್ದಿತ್ತು. ಇವತ್ತು ಮೀನು ಊಟ ಮಾಡಬಹುದು ಅಂತಾ ಸನೋಜ್ ಖುಷಿಯಿಂದ​ ಮನೆಗೆ ತಂದಿದ್ದರು.

ಅಂತೆಯೇ ಸನೋಜ್ ಪತ್ನಿ ಸಂಜೆ ಊಟಕ್ಕೆ ಮೀನು ಸ್ವಚ್ಛಗೊಳಿಸಲು ಪ್ರಾರಂಭಿಸಿದ್ದಳು. ಚಾಕುವಿನಿಂದ ಕತ್ತರಿಸುತ್ತಿದ್ದಾಗ ಹೊಟ್ಟೆಯಲ್ಲಿ ಹಾವಿನ ಚರ್ಮದಂಥ ವಸ್ತು ಕಂಡಿದೆ. ಅದು ಏನೆಂದು ನೋಡಲು ಇಡೀ ಹೊಟ್ಟೆ ಬಗೆದಾಗ ಎರಡು ಅಡಿ ಉದ್ದದ ನಾಗರಹಾವು ಸಿಕ್ಕಿದೆ.

ಅದನ್ನು ಹೊರತೆಗೆದು ಎಚ್ಚರಿಕೆಯಿಂದ ನೋಡಿದಾಗ.. ಹಾವಿನ ಚರ್ಮ ಈಗಾಗಲೇ ಕೊಳೆಯುತ್ತಿತ್ತು. ಹಾವಿನ ತಲೆ ಬಹುತೇಕ ಹಾಗೆಯೇ ಇತ್ತು. ತಲೆಯ ಮೇಲಿನ ವಿಶಿಷ್ಟ ಪಟ್ಟೆಗಳನ್ನು ನೋಡಿ.. ಕುಟುಂಬದ ಸದಸ್ಯರು ಅದು ನಾಗರಹಾವು ಎಂದು ಗುರುತಿಸಿದರು. ಈ ದೃಶ್ಯವನ್ನು ನೋಡಿದ ಎಲ್ಲರೂ ಆಘಾತಕ್ಕೊಳಗಾದರು. ಕೊನೆಗೆ ಹೊಲದ ಪಕ್ಕ ಗುಂಡಿ ಅಗೆದು ಹಾವನ್ನು ಹೂಳಿದ್ದಾರೆ. ಮೀನುಗಾರರು ಹೇಳುವಂತೆ, ಮುರ್ರೆ ಮೀನು ಸಣ್ಣ ಹಾವುಗಳನ್ನು ನುಂಗುತ್ತವೆ. ಆದರೆ ನಾಗರಹಾವನ್ನು ತಿಂದಿದ್ದನ್ನು ಇದೇ ಮೊದಲ ಬಾರಿಗೆ ನೋಡಿರೋದು ಎಂದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!