ಖ್ಯಾತ ಗಾಯಕ ಸೋನು ನಿಗಂ ವಿರುದ್ಧ, ದೂರು ದಾಖಲು.

ಖ್ಯಾತ ಗಾಯಕ ಸೋನು ನಿಗಂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರ ಬಗ್ಗೆ, ಕನ್ನಡತನದ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಈಗಾಗಲೇ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರ ಕನ್ನಡ ಪ್ರೀತಿಯನ್ನು ಭಯೋತ್ಪಾದನೆಗೆ ಗಾಯಕ ಸೋನು ನಿಗಂ ಹೋಲಿಸಿದ್ದು, ಇದೀಗ ಸೋನು ನಿಗಂ ವಿರುದ್ಧ ದೂರು ಸಹ ದಾಖಲಾಗಿದೆ. ಸೋನು ನಿಗಂ ಅವರ ಮತಿಹೀನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ದಾಖಲಿಸಿವೆ. ಕನ್ನಡ ಚಿತ್ರರಂಗ ಸೋನು ನಿಗಂ ಅವರನ್ನು ನಿಷೇಧಿಸಬೇಕೆಂದು ಸಹ ಒತ್ತಾಯಿಸಲಾಗಿದೆ.

ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಸದಸ್ಯರು ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಲಿದ್ದು, ಸೋನು ನಿಗಂ ವಿರುದ್ಧ ದೂರು ದಾಖಲಿಸಲಿದ್ದಾರೆ.

ವಿವಾದದ ಬಗ್ಗೆ ಮಾತನಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರು, ‘ಸೋನು ನಿಗಂ ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ. ಸೋನು ನಿಗಮ್ ಕನ್ನಡದಿಂದ ಬ್ಯಾನ್ ಮಾಡಬೇಕು, ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸುತ್ತಾನಾ? ಸೋನು ನಿಗಂ ಈ ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು, ಇಲ್ಲವಾದರೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ, ಸೋನು ನಿಗಂ ಮೇಲೆ ನಿಷೇಧ ಹೇರಬೇಕು ಎಂದು ಕನ್ನಡ ಚಲನಚಿತ್ರ ಮಂಡಳಿ, ನಿರ್ಮಾಪಕ ಸಂಘಕ್ಕೆ ಆಗ್ರಹಿಸುತ್ತೇನೆ’ ಎಂದಿದ್ದಾರೆ.

 

ಇತ್ತೀಚೆಗೆ ಬೆಂಗಳೂರಿನ ಕಾಲೇಜೊಂದರಲ್ಲಿ ಸೋನು ನಿಗಂ ಲೈವ್ ಗಾಯನಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ ಆಗ ಮಾತನಾಡಿದ ಸೋನು ನಿಗಂ, ‘ಕನ್ನಡ, ಕನ್ನಡ.. ಇದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದು, ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದರು. ಸೋನು ನಿಗಂ ಅವರ ಈ ಹೇಳಿಕೆಗೆ ಕನ್ನಡಿಗರ ಒಕ್ಕೂರಲ ಆಕ್ರೋಶ ವ್ಯಕ್ತವಾಗಿದೆ. ಚಿತ್ರರಂಗದ ಕೆಲ ಪ್ರಮುಖರು ಸೋನು ನಿಗಂ ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!