ಖ್ಯಾತ ಗಾಯಕ ಸೋನು ನಿಗಂ ವಿರುದ್ಧ, ದೂರು ದಾಖಲು.

ಖ್ಯಾತ ಗಾಯಕ ಸೋನು ನಿಗಂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರ ಬಗ್ಗೆ, ಕನ್ನಡತನದ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಈಗಾಗಲೇ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರ ಕನ್ನಡ ಪ್ರೀತಿಯನ್ನು ಭಯೋತ್ಪಾದನೆಗೆ ಗಾಯಕ ಸೋನು ನಿಗಂ ಹೋಲಿಸಿದ್ದು, ಇದೀಗ ಸೋನು ನಿಗಂ ವಿರುದ್ಧ ದೂರು ಸಹ ದಾಖಲಾಗಿದೆ. ಸೋನು ನಿಗಂ ಅವರ ಮತಿಹೀನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ದಾಖಲಿಸಿವೆ. ಕನ್ನಡ ಚಿತ್ರರಂಗ ಸೋನು ನಿಗಂ ಅವರನ್ನು ನಿಷೇಧಿಸಬೇಕೆಂದು ಸಹ ಒತ್ತಾಯಿಸಲಾಗಿದೆ.

ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಸದಸ್ಯರು ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಲಿದ್ದು, ಸೋನು ನಿಗಂ ವಿರುದ್ಧ ದೂರು ದಾಖಲಿಸಲಿದ್ದಾರೆ.

ವಿವಾದದ ಬಗ್ಗೆ ಮಾತನಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರು, ‘ಸೋನು ನಿಗಂ ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ. ಸೋನು ನಿಗಮ್ ಕನ್ನಡದಿಂದ ಬ್ಯಾನ್ ಮಾಡಬೇಕು, ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸುತ್ತಾನಾ? ಸೋನು ನಿಗಂ ಈ ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು, ಇಲ್ಲವಾದರೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ, ಸೋನು ನಿಗಂ ಮೇಲೆ ನಿಷೇಧ ಹೇರಬೇಕು ಎಂದು ಕನ್ನಡ ಚಲನಚಿತ್ರ ಮಂಡಳಿ, ನಿರ್ಮಾಪಕ ಸಂಘಕ್ಕೆ ಆಗ್ರಹಿಸುತ್ತೇನೆ’ ಎಂದಿದ್ದಾರೆ.

 

ಇತ್ತೀಚೆಗೆ ಬೆಂಗಳೂರಿನ ಕಾಲೇಜೊಂದರಲ್ಲಿ ಸೋನು ನಿಗಂ ಲೈವ್ ಗಾಯನಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ ಆಗ ಮಾತನಾಡಿದ ಸೋನು ನಿಗಂ, ‘ಕನ್ನಡ, ಕನ್ನಡ.. ಇದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದು, ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದರು. ಸೋನು ನಿಗಂ ಅವರ ಈ ಹೇಳಿಕೆಗೆ ಕನ್ನಡಿಗರ ಒಕ್ಕೂರಲ ಆಕ್ರೋಶ ವ್ಯಕ್ತವಾಗಿದೆ. ಚಿತ್ರರಂಗದ ಕೆಲ ಪ್ರಮುಖರು ಸೋನು ನಿಗಂ ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!