ಸುದೀಪ್ ವಿರುದ್ಧ ದೂರು ದಾಖಲು, ಪಿತ್ತ ನೆತ್ತಿಗೇರುತ್ತೆ ಎಂದು ರಕ್ಷಿತಾ ಶೆಟ್ಟಿಗೆ ಕಿಚ್ಚ ಬೈಯ್ದಿದ್ದಕ್ಕೆ..!

ಸುದೀಪ್ ವಿರುದ್ಧ ದೂರು ದಾಖಲು, ಪಿತ್ತ ನೆತ್ತಿಗೇರುತ್ತೆ ಎಂದು ರಕ್ಷಿತಾ ಶೆಟ್ಟಿಗೆ ಕಿಚ್ಚ ಬೈಯ್ದಿದ್ದಕ್ಕೆ..!

 

ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಾಗಿದೆ. ಬಿಗ್ ಬಾಸ್ ನಿರೂಪಣೆ ಮಾಡುವಾಗ ರಕ್ಷಿತಾ ಶೆಟ್ಟಿ ಮೇಲೆ ಸುದೀಪ್ ಗರಂ ಆಗಿದ್ದಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಎಂಬುವವರು ದೂರು ನೀಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಹತ್ತು ಹಲವು ಡ್ರಾಮಾಗಳು ನಡೆಯುತ್ತವೆ. ಆ ಶೋ ನೋಡಿದ ಬಳಿಕ ಬಿಗ್ ಬಾಸ್ ಮನೆಯ ಹೊರಗೂ ಒಂದಷ್ಟು ಡ್ರಾಮಾ ಹೆಚ್ಚಾಗಿವೆ. ಬಿಗ್ ಬಾಸ್ ಮನೆಯಲ್ಲಿ ಇರುವ ಸ್ಪರ್ಧಿಗಳ ನಡೆ-ನುಡಿ ಗಮನಿಸಿ ಟೀಕೆ ಮಾಡುವವರು ಹೆಚ್ಚಾಗಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಯಲ್ಲಿ ದೂರುಗಳು ಕೂಡ ದಾಖಲಾಗುತ್ತಿವೆ. ಬಿಗ್ ಬಾಸ್ ಶೋ ನಿರೂಪಕ ಕಿಚ್ಚ ಸುದೀಪ್ (Kichcha Sudeep) ವಿರುದ್ಧವೂ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ! ಹೌದು, ರಕ್ಷಿತಾ ಶೆಟ್ಟಿ (Rakshitha Shetty) ಮೇಲೆ ಸುದೀಪ್ ಗರಂ ಆಗಿದ್ದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ.

ಕಳೆದ 12 ಸೀಸನ್​​ಗಳಲ್ಲಿ ಕಿಚ್ಚ ಸುದೀಪ್ ಅವರೇ ಬಿಗ್ ಬಾಸ್ ಶೋ ನಿರೂಪಣೆ ಮಾಡಿದ್ದಾರೆ. ನೂರಾರು ಸ್ಪರ್ಧಿಗಳನ್ನು ಅವರು ನೋಡಿದ್ದಾರೆ. ಸ್ಪರ್ಧಿಗಳು ತಪ್ಪು ಮಾಡಿದಾಗ ಅವರು ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಇತ್ತೀಚೆಗೆ ಅವರು ರಕ್ಷಿತಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡರು. ಆಗ ‘ಪಿತ್ತ ನೆತ್ತಿಗೆ ಏರುತ್ತದೆ’ ಎಂದು ಹೇಳಿದ್ದರು. ಆ ಮಾತಿಗೆ ಸಂಧ್ಯಾ ಎಂಬುವರಿಂದ ಆಕ್ಷೇಪ ವ್ಯಕ್ತವಾಗಿದೆ.

ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಅವರು ದೂರು ನೀಡಿದ್ದಾರೆ. ಡಿವೈಎಸ್​ಪಿಗೆ ದೂರು ಸಲ್ಲಿಕೆ ಮಾಡಲಾಗಿದೆ. ‘ಸ್ಪರ್ಧಿ ರಕ್ಷಿತಾಗೆ ಸುದೀಪ್ ನಿಂದಿಸಿದ್ದಾರೆ. ಸುದೀಪ್ ಜೊತೆಗೆ ಅಶ್ವಿನಿ ಗೌಡ ವಿರುದ್ಧವೂ ದೂರು ನೀಡಿದ್ದೇನೆ. ಸುದೀಪ್ ಅವರು ಪಿತ್ತ ನೆತ್ತಿಗೇರಲಿದೆ ಎಂಬ ಪದ ಬಳಕೆ ಮಾಡಿದ್ದು ಎಷ್ಟು ಸರಿ? ಇಂತಹ ಪದವನ್ನು ಬಳಕೆ ಮಾಡಿದ್ದು ಸರಿನಾ? ಜೊತೆಗೆ ಅಶ್ವಿನಿ ಗೌಡ ಎಸ್ ಹಾಗೂ ಸ್ಲಂ ಎಂದು ಬಳಸುತ್ತಾರೆ. ಹಾಗಾಗಿ ನಾನು ಈ ಬಗ್ಗೆ ದೂರು ಕೊಟ್ಟಿದ್ದೇನೆ’ ಎಂದು ಸಂಧ್ಯಾ ಹೇಳಿದ್ದಾರೆ. ರಿಷಾ ವಿರುದ್ಧವೂ ದೂರು ನೀಡಲಾಗಿದೆ.

ಗಿಲ್ಲಿ ಮೇಲೂ ದೂರು:
ಇತ್ತೀಚೆಗೆ ಗಿಲ್ಲಿ ನಟ ವಿರುದ್ಧವೂ ಮಹಿಳಾ ಆಯೋಗಕ್ಕೆ ದೂರು ನೀಡಲಾಯಿತು. ಬಿಗ್ ಬಾಸ್ ಮನೆಯಲ್ಲಿ ಹೆಣ್ಮಕ್ಕಳಿಗೆ ಗಿಲ್ಲಿ ಟಾರ್ಚರ್ ನೀಡುತ್ತಿದ್ದಾರೆ ಎಂದು ಆರೋಪಿಸಿ ಕುಶಲಾ ಎಂಬುವವರು ದೂರು ನೀಡಿದರು. ಅದನ್ನು ಪರಿಶೀಲಿಸಿ ಕ್ರಮ ತೆಗೆದುಕೊಂಡು ವರದಿ ಸಲ್ಲಿಸುವಂತೆ ಮಹಿಳಾ ಆಯೋಗವು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಈ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ.

 

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ 50 ದಿನಗಳನ್ನು ಪೂರೈಸಿ ಮುನ್ನಡೆಯುತ್ತಿದೆ. ಈಗಾಗಲೇ ಮಲ್ಲಮ್ಮ, ಚಂದ್ರಪ್ರಭ, ಸತೀಶ್, ಮಂಜು ಭಾಷಿಣಿ, ಅಮಿತ್, ಕರಿಬಸಪ್ಪ, ಅಶ್ವಿನಿ ಎಸ್, ಕಾಕ್ರೋಚ್ ಸುಧಿ ಅವರು ಎಲಿಮಿನೇಟ್ ಆಗಿದ್ದಾರೆ. ಶೋ ಬಗ್ಗೆ ಹೊರಗಡೆ ಕೆಲವು ವಿವಾದಗಳು ಆಗುತ್ತಿವೆ. ಆ ಕುರಿತು ಕಿಚ್ಚ ಸುದೀಪ್ ಅವರು ವಾರಾಂತ್ಯದ ಸಂಚಿಕೆಯಲ್ಲಿ ಏನು ಮಾತನಾಡುತ್ತಾರೆ ಎಂಬ ಕುತೂಹಲ ವೀಕ್ಷಕರಿಗೆ ಇದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!