ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್!

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ.

ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ಇ.ಡಿ ದಾಖಲೆ ಪರಿಶೀಲನೆ ಮಾಡಿದೆ. ಈ ವೇಳೆ 12 ಕೋಟಿ ನಗದು, 1 ಕೋಟಿ ವಿದೇಶಿ ಹಣ, 6 ಕೋಟಿ ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇ.ಡಿ ಸೀಜ್ ಮಾಡಿದೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

ವೀರೇಂದ್ರ ಪಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.

1 ಕೋಟಿ ಫಾರಿನ್ ಕರೆನ್ಸಿ ಪತ್ತೆ
ಇದಲ್ಲದೇ ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊದಲ್ಲಿ ಕ್ಯಾಸಿನೊ ಆಭರಣ, ವಿವಿಧ ಬ್ಯಾಂಕುಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳು, ತಾಜ್, ಹಯಾತ್ ಮತ್ತು ಲೀಲಾ ಪಂಚತಾರಾ ಹೋಟೆಲ್‌ಗಳ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳು, 6 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇದರ ಜೊತೆಗೆ ಐಷಾರಾಮಿ ಕಾರು, 12 ಕೋಟಿ ಮೌಲ್ಯದ ಇಂಡಿಯನ್ ಕರೆನ್ಸಿ, 1 ಕೋಟಿ ಫಾರಿನ್ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!