ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ; ಇವತ್ತು ಜೆಡಿಎಸ್​​ ಧರ್ಮಸ್ಥಳ ಸತ್ಯ ಯಾತ್ರೆ, ನಾಳೆ ಬಿಜೆಪಿ ಸಮಾವೇಶ

ಧರ್ಮಸ್ಥಳದ ಬುರುಡೆ ಕೇಸ್‌ ರಾಜ್ಯ ರಾಜಕೀಯದಲ್ಲೂ ಹಾಟ್​​ ಟಾಪಿಕ್. ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರಗಳು ಜೋರಾಗಿದ್ದು, ಇವತ್ತು ಜೆಡಿಎಸ್​​ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಂಡಿದೆ. ನಾಳೆ ಬಿಜೆಪಿ ಸಮಾವೇಶ ಇಟ್ಟುಕೊಂಡಿದೆ. ದೋಸ್ತಿಗಳಿಬ್ಬರು ಪ್ರತ್ಯೇಕವಾಗಿ ಅಖಾಡಕ್ಕೆ ಇಳಿದಿರೋದು ಭಾರೀ ಚರ್ಚೆಗೆ ಕಾರಣವಾಗಿದೆ. ಧರ್ಮಸ್ಥಳದ ಬುರುಡೆ ಕೇಸ್‌. ಒಂದ್ಕಡೆ ತನಿಖೆ ಆಗ್ತಿದೆ. ಬಂಧಿತ ಬುರುಡೆ ಚೆನ್ನಯ್ಯನ ತನಿಖೆ ತೀವ್ರವಾಗಿದೆ. ಇತ್ತ ರಾಜ್ಯ ರಾಜಕೀಯದಲ್ಲೂ ಇದೇ ವಿಚಾರ ಹಾಟ್​​ ಟಾಪಿಕ್ ಆಗಿದೆ​​​. ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರಗಳು ಜೋರಾಗಿದ್ದು, ಇವತ್ತು ಜೆಡಿಎಸ್​​ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಂಡಿದ್ರೆ, ನಾಳೆ ಬಿಜೆಪಿ ಸಮಾವೇಶ ಇಟ್ಟುಕೊಂಡಿದೆ. ದೋಸ್ತಿಗಳಿಬ್ಬರು ಧರ್ಮಸ್ಥಳ ವಿಚಾರದಲ್ಲಿ ಪ್ರತ್ಯೇಕವಾಗಿ ಅಖಾಡಕ್ಕೆ ಇಳಿದಿರೋದು ರಾಜ್ಯ ರಾಜಕೀಯದಲ್ಲಿ ಭಾರೀ ಗಮನ ಸೆಳೆಯುತ್ತಿದೆ.

ಜೆಡಿಎಸ್​ ಪಾದಯಾತ್ರೆ..! ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ.. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕವಾಗಿದೆ. ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ.ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 1 ಬಿಜೆಪಿ ಸಮಾವೇಶ : ಧರ್ಮಸ್ಥಳ ಹೆಸರು ಕೆಡಿಸಲು ಸರ್ಕಾರದ ಪಿತೂರಿ ಅಂತ ಬಿಜೆಪಿ ಧರ್ಮ ರಕ್ಷಣಾ ಯಾತ್ರೆ ನಡೆಸ್ತಿದೆ. ಧರ್ಮಸ್ಥಳ ಮೇಲಿನ ಷಡ್ಯಂತ್ರದ ತನಿಖೆಯನ್ನ NIAಗೆ ಒಪ್ಪಿಸುವಂತೆ ಕರೆ ಕೊಟ್ಟಿದೆ.. ಸೆಪ್ಟೆಂಬರ್​​​​ 1 ರಂದು ಧರ್ಮಸ್ಥಳ ಚಲೋಗೆ ಕರೆ ಕೊಟ್ಟಿದೆ. ಅಲ್ಲದೆ ಧರ್ಮಸಂರಕ್ಷಣಾ ಸಮಾವೇಶಕ್ಕೆ ಪ್ಲಾನ್​​​ ಮಾಡಿದೆ.

 

ಬಿಜೆಪಿ ಆರೋಪ ಏನು? :ಸಿಎಂ ಸಿದ್ದರಾಮಯ್ಯರಿಗೆ ದೇವರ ಮೇಲೆ ನಂಬಿಕೆ ಅಷ್ಟಕ್ಕಷ್ಟೇ. ಧರ್ಮಸ್ಥಳದ ಅಣ್ಣಪ್ಪನ ಮೇಲೆ ಅವರಿಗೆ ಎಷ್ಟು ಭಕ್ತಿ ಇದೆ? ಗೊತ್ತಿಲ್ಲ. ಧರ್ಮಸ್ಥಳದ ಅಣ್ಣಪ್ಪನಿಗೆ ಕೋಟಿ ಕೋಟಿ ಭಕ್ತರಿದ್ದಾರೆ. ಕೋಟಿ ಕೋಟಿ ಭಕ್ತರಿಗೆ ಧರ್ಮಸ್ಥಳ ಒಂದು ಪುಣ್ಯಕ್ಷೇತ್ರ. ಧರ್ಮಸ್ಥಳ ಕೇವಲ ಒಂದು ಮಂದಿರ ಅಲ್ಲ. ಅದು ಭಾವನೆ.

ಹಲವಾರು ದಶಕಗಳಿಂದ ಅದನ್ನೇ ಉಳಿಸಿಕೊಂಡು ಬರಲಾಗಿದೆ.. ಇಂತಹ ಕ್ಷೇತ್ರದ ಮೇಲೆ ಯಾರೋ ಒಬ್ಬ ವ್ಯಕ್ತಿ ಬುರುಡೆ ಹಿಡಿದುಕೊಂಡು ಬಂದು ಬುರುಡೆ ಬಿಟ್ಟಿದ್ದಾನೆ.. ಆ ವ್ಯಕ್ತಿ ಯಾರು? ಆತನ ಹಿಂದೆ ಯಾರಿದ್ದಾರೆ? ಆತನಿಗೆ ಬೆಂಬಲಿಸಿದ್ಯಾರು? ಇಂತಹ ವಿಚಾರಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕಿತ್ತು.. ಆದ್ರೆ, ಸಿಎಂ ಆತುರ ಪಟ್ಟು ನಿರ್ಧಾರ ತಗೊಂಡು ಜನ ಸಮುದಾಯದಲ್ಲಿ ಕ್ಷೇತ್ರದ ಮೇಲೆ ಅನುಮಾನ ಬರೋ ರೀತಿ ನಡೆದುಕೊಂಡ್ರು ಅನ್ನೋದು ಬಿಜೆಪಿ ಮಾಡ್ತಿರೋ ಆರೋಪ. ಸೆಪ್ಟೆಂಬರ್​​ 1ರಂದು ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!