ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ.ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು. ಎಂದರು.

ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!