
ಕರೋನಾ ರೋಗದಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ. ಕರೋನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ, ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ. ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ. ಕರೋನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್ಎನ್ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಈ ವ್ಯಾಕ್ಸಿನ್ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ ಎಂದು ತಿಳಸಿದ್ದಾರೆ.

ಹೃದಯಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ. ಹೃದಯಾಘಾತದ ಬಗ್ಗೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಶಿಕ್ಷಣ ಇಲಾಖೆ ಮುಂದಿನ ವರ್ಷದಿಂದ ಪಠ್ಯ ಅಳವಡಿಕೆ ಮಾಡುತ್ತೆ ಎಂದು ಹೇಳಿದರು. ತಾಲೂಕು ಆಸ್ಪತ್ರೆಗಳಿಗೂ ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುತ್ತದೆ. ಸರ್ಕಾರಿ ನೌಕರರು, ಗುತ್ತಿಗೆ ನೌಕರರು ತಪಾಸಣೆ ಮಾಡಿಸಿಕೊಳ್ಳಬೇಕು. ಜನರ ಜೀವನಶೈಲಿ ಹೃದಯಘಾತಕ್ಕೆ ಕಾರಣವಾಗಿದೆ. ಶೇ 50 ಕ್ಕಿಂತ ಹೆಚ್ಚು ಧೂಮಪಾನಿಗಳಿಗೆ ಹೃದಯಘಾತವಾಗಿದೆ ಎಂದು ತಿಳಿಸಿದರು.

ಕರೋನಾಗಿಂತ ಮುಂಚೆ ಮತ್ತು ಕರೋನಾ ನಂತರ ಸಾಕಷ್ಟು ಬದಾಲಾವಣೆಯಾಗಿದೆ. ಒಬೆಸಿಟಿ, ಡಯಾಬಿಟಿಸ್ ಎಲ್ಲವೂ ಹೆಚ್ಚಾಗಿ ಕಂಡುಬಂದಿದೆ. ಈ ಕಾರಣದಿಂದ ಕರೋನಾ ರೋಗದ ಪರಿಣಾಮ ಸಾರ್ವಜನಿಕರ ಮೇಲೆ ಆಗಿದೆ. ಕರೋನಾ ಬಂದಾಗ ತೆಗೆದುಕೊಂಡ ಬೇರೆ ಬೇರೆ ಮೆಡಿಸನ್ನಿಂದ ಹೃದಯದ ಮೇಲೆ ಪರಿಣಾಮ ಬೀರಿದೆ. ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ವರದಿ ಕೈಸೇರಲಿದೆ ಎಂದರು. ಸರ್ಕಾರಿ, ಗುತ್ತಿಗೆ ನೌಕರರು ಮತ್ತು ಖಾಸಗಿ ಉದ್ಯೋಗಿಗಳು ವರ್ಷಕ್ಕೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ನಾವು ಸೂಚನೆ ನೀಡುತ್ತಿದ್ದೇವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮತಷ್ಟು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಭರವಸೆ ನೀಡಿದರು.





