ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹ*!

 

ಅದು ಮುದ್ದಾದ ಸಂಸಾರ. ಮದುವೆಯಾಗಿ ಮೂರು ವರ್ಷವಷ್ಟೇ ಆಗಿತ್ತು. ಆ ಕುಟುಂಬದಲ್ಲಿ ಎಲ್ಲವೂ ಸರಿಯಾಗಿಯೇ ಇದೆ ಅಂದುಕೊಳ್ತಿರುವಾಗಲೇ ಬೆಳ್ಳಂಬೆಳಗ್ಗೆ ಶಾಕಿಂಗ್ ನ್ಯೂಸ್ ಬಂದಿದೆ. ಎರಡು ವರ್ಷಗಳ ಹಿಂದಷ್ಟೇ ಪ್ರಪಂಚಕ್ಕೆ ಬಂದು ಈಗಷ್ಟೇ ಕಣ್ತೆರೆಯುತ್ತಿದ್ದ ಕಂದಮ್ಮನನ್ನ ಹೆತ್ತವರೇ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿ ತಾವು ಸಾವಿನ ಮನೆ ಸೇರಿದ್ದಾರೆ.ಆದ್ರೆ, ಪವಾಡಸದೃಶ ರೀತಿಯಲ್ಲಿ ಮಗು ಬದುಕುಳಿದಿದೆ.

ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವಿನೊಂದಿಗೆ ಮಂಡ್ಯದ ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ವಾಸವಾಗಿದ್ದರು. ಆದ್ರೆ, ಗಂಡ ಹೆಂಡತಿ ನಡುವೆ ಅದೇನಾಗಿತ್ತೋ ಏನೋ ದಂಪತಿ ಇಂದು ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ. ಆದ್ರೆ, ದಂಪತಿ ಸಾಯುವ ಮುನ್ನ ತಮ್ಮ ಎರಡು ವರ್ಷದ ಮಗುವನ್ನು ಸಹ ಕೊಲ್ಲಲು ತೀರ್ಮಾನಿಸಿದ್ದರು.

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
ಅದರಂತೆ ಮಗುವನ್ನು ಕತ್ತು ಹಿಸುಕಿದ್ದಾರೆ. ಇದರಿಂದ ಮಗು ಅಸ್ವಸ್ಥಗೊಂಡು ಬಿದ್ದಿದೆ. ಬಳಿಕ ದಂಪತಿ ಮಗು ಸಾವನ್ನಪ್ಪಿದೆ ಎಂದು ತಾವು ಸಹ ನೇಣಿಗೆ ಕೊರಳೊಡ್ಡಿದ್ದಾರೆ. ಆದ್ರೆ, ದಂಪತಿ ಸಾವನ್ನಪ್ಪುತ್ತಿದ್ದಂತೆಯೇ ಇನ್ನೊಂದೆಡೆ ಮಗು ಉಸಿರಾಡಿದ್ದು, ಪವಾಡದ ತೀರಿಯಲ್ಲಿ ಬದುಕುಳಿದಿದೆ. ಆದ್ರೆ, ತಂದೆ ತಾಯಿ ಇಲ್ಲದೇ ಅನಾಥವಾಗಿದ್ದು, ಎರಡು ಕಡೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನನ್ನು ಬದುಕುಳಿದ ಮಗುವನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದಂಪತಿಯ ಕೆಟ್ಟ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಂಟುಂಬಿಕ ಕಲಹದಿಂದ ಬೇಸತ್ತು ಈ ಪ್ರಪಂಚವನ್ನೇ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸರ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಲಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!