ಕನ್ನಡದ ಬಗ್ಗೆ ವಿವಾದ ಹೇಳಿಕೆ ; ಕಮಲ್ ಹಾಸನ್ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್!

ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಬೇಡದ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಈ ವಿವಾದ ಇನ್ನೂ ಕಡಿಮೆ ಆಗಿಲ್ಲ. ಅವರ ಬಗ್ಗೆ ಕೋರ್ಟ್ನಲ್ಲಿ ಕೇಸ್ಗಳು ನಡೆಯುತ್ತಲೇ ಇವೆ. ಈಗ ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ಕಮಲ್ ಹಾಸನ್ಗೆ ಕೋರ್ಟ್ ನಿರ್ಬಂಧ ಹೇರಿದೆ. ಒಂದೊಮ್ಮೆ ಅವರು ಆದೇಶ ಮೀರಿದರೆ ನ್ಯಾಯಾಂಗ ನಿಂದನೆ ಮಾಡಿದಂತೆ ಆಗುತ್ತದೆ.

 

 

 

 

 

 

ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ಪ್ರಚಾರದ ವೇಳೆ ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂದಿದ್ದರು. ಇದಕ್ಕೆ ವಿರೋಧ ವ್ಯಕ್ತವಾಯಿತು. ಈ ಸಿನಿಮಾ ರಿಲೀಸ್ ಆಗಲು ಕರ್ನಾಟಕದಲ್ಲಿ ಅವಕಾಶ ನೀಡಿರಲೇ ಇಲ್ಲ. ಸಿನಿಮಾ ರಿಲೀಸ್ಗೆ ಕರ್ನಾಟಕದಲ್ಲಿ ಅಸಹಕಾರ ತೋರಿಸಲಾಯಿತು. ಇದನ್ನು ಬ್ಯಾನ್ ಎಂದು ಚಿತ್ರತಂಡದವರು ಕರೆದರು. ಈ ಕಾರಣದಿಂದ ನೇರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು.

ಹಲವು ದಿನಗಳ ಹೋರಾಟಗಳ ಬಳಿಕ ಪ್ರಕರಣ ಕಮಲ್ ಹಾಸನ್ ಪರ ಆಯಿತು. ಆದಾಗ್ಯೂ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗಿಯೇ ಇಲ್ಲ. ಈಗ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ನಿರ್ಬಂಧ ಹೇರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಕೋರ್ಟ್ ಎದುರು ಕೋರಿತ್ತು. ಇದಕ್ಕೆ ಕೋರ್ಟ್ ಒಪ್ಪಿ ಕನ್ನಡ ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಹೇಳಿಕೆ ನೀಡದಂತೆ ನಿರ್ಬಂಧ ಹೇರಿ ಬೆಂಗಳೂರಿನ 31ನೇ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ಒಟಿಟಿಗೆ ಬಂದಿದೆ. ಜುಲೈ 2ರಂದು ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ತಮಿಳು, ಕನ್ನಡ, ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಪ್ರಸಾರ ಕಂಡಿದೆ. ಈ ಚಿತ್ರ ಕನ್ನಡ ವರ್ಷನ್ ಸಿದ್ಧವಿದ್ದರೂ ಅದನ್ನು ಈ ಮೊದಲು ರಿಲೀಸ್ ಮಾಡಲು ತಂಡ ಮುಂದೆ ಬಂದಿರಲಿಲ್ಲ. ಈಗ ಒಟಿಟಿಯಲ್ಲಿ ಕನ್ನಡ ವರ್ಷನ್ ರಿಲೀಸ್ ಆಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!