ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕು ಕಾರುಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶ.

ಮೈಸೂರು : ಭೂ ಸ್ವಾಧೀನದ ಬಾಕಿ ಪರಿಹಾರ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕೆ ಸೇರಿದ ನಾಲ್ಕು ಕಾರುಗಳ ಜಪ್ತಿಗೆ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

ಮೈಸೂರಿನ ಹೃದಯ ಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯ ಅಗಲೀಕರಣಕ್ಕಾಗಿ 1979ರಲ್ಲಿ ಗುಣಾಂಬ ಮ್ಯಾಟೆರ್ನಿಟಿ ಆಂಡ್ ಚೈಲ್ಡ್ ವೇಲ್‌ಫೇ‌ರ್ ಟ್ರಸ್ಟ್‌ಗೆ ಸೇರಿದ ಜಾಗವನ್ನು ಅಂದಿನ ಸಿಐಟಿಐ (ಇಂದಿನ ಎಂಡಿಎ) ಭೂಸ್ವಾಧೀನಪಡಿಸಿ ಕೊಂಡಿತ್ತು. ಈ ಸಂಬಂಧ ನಿಗದಿಪಡಿಸಿದ ಪರಿಹಾರ ನ್ಯಾಯಸಮ್ಮತವಲ್ಲವೆಂದು ಟ್ರಸ್ಟ್ ನ್ಯಾಯಾಲಯದ ಮೊರೆ ಹೋಗಿತ್ತು.

ಇದೀಗ ಕೋರ್ಟ್ ಆದೇಶದಂತೆ ಬಾಕಿ ಪರಿಹಾರ ಪಾವತಿಸದ ಕಾರಣ ಎಂಡಿಎಗೆ ಸೇರಿದ ನಾಲ್ಕು ಕಾರುಗಳನ್ನು ಜಪ್ತಿ ಮಾಡಿಕೊಳ್ಳುವಂತೆ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಅದರಂತೆ ಮಂಗಳವಾರ ಟ್ರಸ್ಟ್ ಪರ ವಕೀಲ ಬಿ.ಎಸ್.ಚಂದ್ರಶೇಖರ್, ಕೋರ್ಟ್ ಅಮೀನ್ ಬರಿಗೈಯಲ್ಲಿ ಹಿಂತಿರುಗಿದರು.

ಈ ಸಂಬಂಧ ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ವಕೀಲ ಬಿ.ಎಸ್.ಚಂದ್ರಶೇಖರ್, ಬಾಕಿ ಪರಿಹಾರ ಹಣ ಮತ್ತು ಅದರ ಮೇಲಿನ ಬಡ್ಡಿ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಎಂಡಿಎಗೆ ಸೇರಿದ ನಾಲ್ಕು ಕಾರುಗಳ ವಶಕ್ಕೆ ಕೋರ್ಟ್ ಜಪ್ತಿ ವಾರಂಟ್ ಹೊರಡಿಸಿದೆ ಎಂದು ತಿಳಿಸಿದರು.

ನಿಗದಿಪಡಿಸಿದ ಪರಿಹಾರ ಹಣ ಸೂಕ್ತವಲ್ಲ ವೆಂದು ಟ್ರಸ್ಟ್‌ನಿಂದ ತಕಾರರು ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಕಡತವನ್ನು ನ್ಯಾಯಾಲಯಕ್ಕೆ ಎಂಡಿಎ ಸಲ್ಲಿಸಿತ್ತು. ಭೂ ಸ್ವಾಧೀನ ಕಾಯ್ದೆ ಕಲಂ 18ರ ಅಡಿಯಲ್ಲಿ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಹೆಚ್ಚಿನ ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಆ ಬಳಿಕ ಕೋರ್ಟ್ ಸೂಚಿಸಿದ ಒಟ್ಟು 8 ಕೋಟಿ ಪರಿಹಾರದ ಹಣದಲ್ಲಿ ಹಂತ ಹಂತವಾಗಿ 5 ಕೋಟಿ ರೂ. ಅನ್ನು ಎಂಡಿಎಯಿಂದ ಸದರಿ ಟ್ರಸ್ಟ್‌ಗೆ ಪಾವತಿ ಮಾಡಲಾಗಿದೆ. ಆದರೆ ಬಾಕಿ ಇರುವ 3 ಕೋಟಿ ರೂ.ಗೂ ಅಧಿಕ ಪರಿಹಾರದ ವನ್ನು ಪಾವತಿಸದೇ ವಿಳಂಬ ಮಾಡುತ್ತಿರುವ ಪ ಯಲ್ಲಿ ಡಿಕ್ಕಿದಾರರಾದ ಟ್ರಸ್ಟ್ನವರು ಕೋರ್ಟ್‌ನಲ್ಲಿ ಅರ್ಜಿ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕೋರ್ಟ್ ಎಂ ಡಿ ಎ ಆಯುಕ್ತರ ಕಾರು ಸೇರಿದಂತೆ ನಾಲ್ಕು ಕಾದ ಜಪ್ತಿಗೆ ಆದೇಶಿಸಿದೆ. ಹೀಗಾಗಿ ಕೋರ್ಟ್ ಅಮೀನ್ ಸುರೇಶ್ ಜಪ್ತಿ ವಾರಂಟ್ಅನ್ನು ಎಂ ಡಿ ಎ. ಅಧಿಕಾರಿಗಳ ಮುಂದೆ ಹಾಜರುಪಡಿಸಿದರೂ ಪ್ರಯೋಜನವಾಗಿಲಿಲ್ಲ. ಜಪ್ತಿಗೆ ಸಂಬಂಧಿಸಿದ ಕಾರುಗಳು ಎಂ ಡಿ ಎ ಕಜೇರಿ ಆವರಣದಲ್ಲಿ ಇರಲಿಲ್ಲ ಎಂದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು