ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕು ಕಾರುಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶ.

ಮೈಸೂರು : ಭೂ ಸ್ವಾಧೀನದ ಬಾಕಿ ಪರಿಹಾರ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕೆ ಸೇರಿದ ನಾಲ್ಕು ಕಾರುಗಳ ಜಪ್ತಿಗೆ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

ಮೈಸೂರಿನ ಹೃದಯ ಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯ ಅಗಲೀಕರಣಕ್ಕಾಗಿ 1979ರಲ್ಲಿ ಗುಣಾಂಬ ಮ್ಯಾಟೆರ್ನಿಟಿ ಆಂಡ್ ಚೈಲ್ಡ್ ವೇಲ್‌ಫೇ‌ರ್ ಟ್ರಸ್ಟ್‌ಗೆ ಸೇರಿದ ಜಾಗವನ್ನು ಅಂದಿನ ಸಿಐಟಿಐ (ಇಂದಿನ ಎಂಡಿಎ) ಭೂಸ್ವಾಧೀನಪಡಿಸಿ ಕೊಂಡಿತ್ತು. ಈ ಸಂಬಂಧ ನಿಗದಿಪಡಿಸಿದ ಪರಿಹಾರ ನ್ಯಾಯಸಮ್ಮತವಲ್ಲವೆಂದು ಟ್ರಸ್ಟ್ ನ್ಯಾಯಾಲಯದ ಮೊರೆ ಹೋಗಿತ್ತು.

ಇದೀಗ ಕೋರ್ಟ್ ಆದೇಶದಂತೆ ಬಾಕಿ ಪರಿಹಾರ ಪಾವತಿಸದ ಕಾರಣ ಎಂಡಿಎಗೆ ಸೇರಿದ ನಾಲ್ಕು ಕಾರುಗಳನ್ನು ಜಪ್ತಿ ಮಾಡಿಕೊಳ್ಳುವಂತೆ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಅದರಂತೆ ಮಂಗಳವಾರ ಟ್ರಸ್ಟ್ ಪರ ವಕೀಲ ಬಿ.ಎಸ್.ಚಂದ್ರಶೇಖರ್, ಕೋರ್ಟ್ ಅಮೀನ್ ಬರಿಗೈಯಲ್ಲಿ ಹಿಂತಿರುಗಿದರು.

ಈ ಸಂಬಂಧ ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ವಕೀಲ ಬಿ.ಎಸ್.ಚಂದ್ರಶೇಖರ್, ಬಾಕಿ ಪರಿಹಾರ ಹಣ ಮತ್ತು ಅದರ ಮೇಲಿನ ಬಡ್ಡಿ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಎಂಡಿಎಗೆ ಸೇರಿದ ನಾಲ್ಕು ಕಾರುಗಳ ವಶಕ್ಕೆ ಕೋರ್ಟ್ ಜಪ್ತಿ ವಾರಂಟ್ ಹೊರಡಿಸಿದೆ ಎಂದು ತಿಳಿಸಿದರು.

ನಿಗದಿಪಡಿಸಿದ ಪರಿಹಾರ ಹಣ ಸೂಕ್ತವಲ್ಲ ವೆಂದು ಟ್ರಸ್ಟ್‌ನಿಂದ ತಕಾರರು ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಕಡತವನ್ನು ನ್ಯಾಯಾಲಯಕ್ಕೆ ಎಂಡಿಎ ಸಲ್ಲಿಸಿತ್ತು. ಭೂ ಸ್ವಾಧೀನ ಕಾಯ್ದೆ ಕಲಂ 18ರ ಅಡಿಯಲ್ಲಿ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಹೆಚ್ಚಿನ ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಆ ಬಳಿಕ ಕೋರ್ಟ್ ಸೂಚಿಸಿದ ಒಟ್ಟು 8 ಕೋಟಿ ಪರಿಹಾರದ ಹಣದಲ್ಲಿ ಹಂತ ಹಂತವಾಗಿ 5 ಕೋಟಿ ರೂ. ಅನ್ನು ಎಂಡಿಎಯಿಂದ ಸದರಿ ಟ್ರಸ್ಟ್‌ಗೆ ಪಾವತಿ ಮಾಡಲಾಗಿದೆ. ಆದರೆ ಬಾಕಿ ಇರುವ 3 ಕೋಟಿ ರೂ.ಗೂ ಅಧಿಕ ಪರಿಹಾರದ ವನ್ನು ಪಾವತಿಸದೇ ವಿಳಂಬ ಮಾಡುತ್ತಿರುವ ಪ ಯಲ್ಲಿ ಡಿಕ್ಕಿದಾರರಾದ ಟ್ರಸ್ಟ್ನವರು ಕೋರ್ಟ್‌ನಲ್ಲಿ ಅರ್ಜಿ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕೋರ್ಟ್ ಎಂ ಡಿ ಎ ಆಯುಕ್ತರ ಕಾರು ಸೇರಿದಂತೆ ನಾಲ್ಕು ಕಾದ ಜಪ್ತಿಗೆ ಆದೇಶಿಸಿದೆ. ಹೀಗಾಗಿ ಕೋರ್ಟ್ ಅಮೀನ್ ಸುರೇಶ್ ಜಪ್ತಿ ವಾರಂಟ್ಅನ್ನು ಎಂ ಡಿ ಎ. ಅಧಿಕಾರಿಗಳ ಮುಂದೆ ಹಾಜರುಪಡಿಸಿದರೂ ಪ್ರಯೋಜನವಾಗಿಲಿಲ್ಲ. ಜಪ್ತಿಗೆ ಸಂಬಂಧಿಸಿದ ಕಾರುಗಳು ಎಂ ಡಿ ಎ ಕಜೇರಿ ಆವರಣದಲ್ಲಿ ಇರಲಿಲ್ಲ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!